September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ವೇದಿಕೆಯಲ್ಲಿ, ಪ್ರಾಂಶುಪಾಲ ವಂ.ಫಾ ವಿಜಯ್ ಲೋಬೋ, ಶಾಲಾ ನಾಯಕಿಯರಾದ ಸಿಂಚನ ಮತ್ತು ಮಿಷೆಲ್ ಪಿಂಟೊ ಉಪಸ್ಥಿತರಿದ್ದರು.

ಮುಖ್ಯ ಅತಿಥಿ ಪ್ರಭಾತ ಸ್ಟೋರ್ ಮಾಲಕ ಪ್ರವೀಣ್ ಭಟ್ ಮಾತನಾಡಿ ಮಕ್ಕಳು ನಮ್ಮ ರಾಷ್ಟ್ರದ ಭವಿಷ್ಯ. ಅವರಲ್ಲಿ ಸೃಜನಶೀಲತೆ, ಮೌಲ್ಯಗಳು ಹಾಗೂ ಆತ್ಮವಿಶ್ವಾಸ ಬೆಳೆಸುವುದು ಶಾಲೆಯ ಹೊಣೆಗಾರಿಕೆ ಎಂದು ಹೇಳಿದರು.

ಶಾಲಾ ಸಂಚಾಲಕ ವಂ.ಫಾ. ಅಬೆಲ್ ಲೋಬೊ ಮಕ್ಕಳ ದಿನಾಚರಣೆಯ ಶುಭ ಸಂದೇಶವನ್ನು ನೀಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರಿಂದ ಮಕ್ಕಳಿಗೆ ವಿಶೇಷವಾಗಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲಾಗಿದ್ದು, ಶಾಲಾ ವಾರ್ಷಿಕೋತ್ಸವದ ಅಂಗವಾಗಿ ನಡೆಸಲಾದ ಸ್ಪರ್ಧೆಯಲ್ಲಿ ವಿಜೇತರಾದವರನ್ನು ಪ್ರಶಸ್ತಿ ಹಾಗೂ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಯಿತು.

ಶಿಕ್ಷಕರು ಹಾಗೂ ಸಿಬ್ಬಂದಿಗಳು ಸಹಕರಿಸಿದರು. ಸಹಶಿಕ್ಷಕಿಯರಾದ ಕೀರ್ತಿಕ ಸ್ವಾಗತಿಸಿ, ನಿಶಾ ನಿರೂಪಿಸಿ, ರಕ್ಷಾ ವಂದಿಸಿದರು.

Related posts

ಉಜಿರೆ : ಅನುಗ್ರಹ ಆಂ.ಮಾ. ಶಾಲೆಯಲ್ಲಿ ಚಿಟ್ಟೆಗಳ ವರ್ತನೆಯ ಜೀವಶಾಸ್ತ್ರ ಕಾರ್ಯಾಗಾರ

Suddi Udaya

ಎಕ್ಸಲೆಂಟ್ ಕಾಲೇಜಿನಲ್ಲಿ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ

Suddi Udaya

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya
error: Content is protected !!