25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

ಬೆಳ್ತಂಗಡಿ: ಹಿಂದೂ ಮುಖಂಡರ ಮನೆಗಳಿಗೆ ತಡರಾತ್ರಿ ಪೋಲಿಸರು ತೆರಳಿ ಫೋಟೋ ತೆಗೆಯುತ್ತಿದ್ದ ಘಟನೆಗೆ ಸಂಬಂಧಿಸಿ, ಜೂ.4ರಂದು ಕಡಬ ಠಾಣೆಯ ಮುಂದೆ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿ.ಹಿಂ.ಪ. ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿ ದ್ವೇಷಭಾಷಣ ಮಾಡಿದ್ದಕ್ಕೆ ಕಡಬ ಠಾಣೆಯಲ್ಲಿ ದಾಖಲಾಗಿದ್ದ ಎಫ್.ಐ.ಆರ್.ನ್ನು ಹೈಕೋರ್ಟ್ ನ.12ರಂದು ವಜಾಗೊಳಿಸಿದೆ.

ತಡರಾತ್ರಿ ಸಂಘಟನೆಗಳ ಪ್ರಮುಖರ ಮನೆಗಳಿಗೆ ಪೊಲೀಸರು ತೆರಳಿ ಅವರ ಜತೆ ಫೋಟೋ ತೆಗೆದಿದ್ದರು. ಈ ಘಟನೆಯನ್ನು ಖಂಡಿಸಿ ಕಡಬ ಠಾಣೆಯ ಎದುರು ಜೂ.4ರಂದು ಸಂಜೆ ಪ್ರತಿಭಟನೆ ನಡೆಸಲಾಗಿದ್ದು, ನವೀನ್ ನೆರಿಯ ಅವರು ಭಾಷಣ ಮಾಡಿದ್ದರು. ಈ ಘಟನೆಯ ಬಗ್ಗೆ ದ್ವೇಷ ಭಾಷಣ ಮಾಡಿ ಕೋಮು ಸಾಮರಸ್ಯಕ್ಕೆ ಧಕ್ಕೆ ಮಾಡಲಾಗಿದೆ ಎಂದು ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದನ್ನು ಪ್ರಶ್ನಿಸಿ ನವೀನ್ ನೆರಿಯ ಅವರು ಖ್ಯಾತ ವಕೀಲ ಅರುಣ್ ಶ್ಯಾಮ್ ಅವರ ಮೂಲಕ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಈ ಬಗ್ಗೆ ವಿಚಾರಣೆ ನಡೆದು, ನ.12ರಂದು ಹೈಕೋರ್ಟ್ ಅವರ ವಿರುದ್ದ ದಾಖಲಾಗಿದ್ದ ಎಫ್ ಐ ಆ‌ರ್ ನ್ನು ರದ್ದುಗೊಳಿಸಿ ಆದೇಶನೀಡಿದೆ.

Related posts

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ನಾಗಶ್ರೀ ‘ಎ’ ಸ್ವ-ಸಹಾಯ ಸಂಘದ ಸದಸ್ಯೆ ಡೊಂಬಕ್ಕರವರಿಗೆ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

Suddi Udaya

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

Suddi Udaya

ಬೆಳ್ತಂಗಡಿ :ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ ಮತ್ತು ರಂಗ ತರಬೇತಿಯ ಉದ್ಘಾಟನೆ

Suddi Udaya

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya
error: Content is protected !!