23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

ಬೆಳ್ತಂಗಡಿ: ಹಿಂದೂ ಮುಖಂಡರ ಮನೆಗಳಿಗೆ ತಡರಾತ್ರಿ ಪೋಲಿಸರು ತೆರಳಿ ಫೋಟೋ ತೆಗೆಯುತ್ತಿದ್ದ ಘಟನೆಗೆ ಸಂಬಂಧಿಸಿ, ಜೂ.4ರಂದು ಕಡಬ ಠಾಣೆಯ ಮುಂದೆ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿ.ಹಿಂ.ಪ. ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿ ದ್ವೇಷಭಾಷಣ ಮಾಡಿದ್ದಕ್ಕೆ ಕಡಬ ಠಾಣೆಯಲ್ಲಿ ದಾಖಲಾಗಿದ್ದ ಎಫ್.ಐ.ಆರ್.ನ್ನು ಹೈಕೋರ್ಟ್ ನ.12ರಂದು ವಜಾಗೊಳಿಸಿದೆ.

ತಡರಾತ್ರಿ ಸಂಘಟನೆಗಳ ಪ್ರಮುಖರ ಮನೆಗಳಿಗೆ ಪೊಲೀಸರು ತೆರಳಿ ಅವರ ಜತೆ ಫೋಟೋ ತೆಗೆದಿದ್ದರು. ಈ ಘಟನೆಯನ್ನು ಖಂಡಿಸಿ ಕಡಬ ಠಾಣೆಯ ಎದುರು ಜೂ.4ರಂದು ಸಂಜೆ ಪ್ರತಿಭಟನೆ ನಡೆಸಲಾಗಿದ್ದು, ನವೀನ್ ನೆರಿಯ ಅವರು ಭಾಷಣ ಮಾಡಿದ್ದರು. ಈ ಘಟನೆಯ ಬಗ್ಗೆ ದ್ವೇಷ ಭಾಷಣ ಮಾಡಿ ಕೋಮು ಸಾಮರಸ್ಯಕ್ಕೆ ಧಕ್ಕೆ ಮಾಡಲಾಗಿದೆ ಎಂದು ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದನ್ನು ಪ್ರಶ್ನಿಸಿ ನವೀನ್ ನೆರಿಯ ಅವರು ಖ್ಯಾತ ವಕೀಲ ಅರುಣ್ ಶ್ಯಾಮ್ ಅವರ ಮೂಲಕ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಈ ಬಗ್ಗೆ ವಿಚಾರಣೆ ನಡೆದು, ನ.12ರಂದು ಹೈಕೋರ್ಟ್ ಅವರ ವಿರುದ್ದ ದಾಖಲಾಗಿದ್ದ ಎಫ್ ಐ ಆ‌ರ್ ನ್ನು ರದ್ದುಗೊಳಿಸಿ ಆದೇಶನೀಡಿದೆ.

Related posts

ಉಜಿರೆ ಎಸ್ ಡಿ ಎಮ್ ಪ. ಪೂ. ಕಾಲೇಜು : ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜಲ ಸಂರಕ್ಷಣೆ ಕುರಿತು ಪ್ರಾತ್ಯಕ್ಷಿಕೆ

Suddi Udaya

ಉಜಿರೆ ಬ್ಯಾಂಕ್ ಆಫ್ ಬರೋಡದಿಂದ ಕೆಮ್ಮಟೆ ಶಾಲಾ ಮಕ್ಕಳಿಗೆ ಆಟೋಟ ವಸ್ತುಗಳ ಕೊಡುಗೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

Suddi Udaya

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣಹೋಮ ಮತ್ತು ಭತ್ತದ ತೆನೆ ವಿತರಣೆ

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya
error: Content is protected !!