22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

ಬೆಳ್ತಂಗಡಿ: ಹಿಂದೂ ಮುಖಂಡರ ಮನೆಗಳಿಗೆ ತಡರಾತ್ರಿ ಪೋಲಿಸರು ತೆರಳಿ ಫೋಟೋ ತೆಗೆಯುತ್ತಿದ್ದ ಘಟನೆಗೆ ಸಂಬಂಧಿಸಿ, ಜೂ.4ರಂದು ಕಡಬ ಠಾಣೆಯ ಮುಂದೆ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿ.ಹಿಂ.ಪ. ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿ ದ್ವೇಷಭಾಷಣ ಮಾಡಿದ್ದಕ್ಕೆ ಕಡಬ ಠಾಣೆಯಲ್ಲಿ ದಾಖಲಾಗಿದ್ದ ಎಫ್.ಐ.ಆರ್.ನ್ನು ಹೈಕೋರ್ಟ್ ನ.12ರಂದು ವಜಾಗೊಳಿಸಿದೆ.

ತಡರಾತ್ರಿ ಸಂಘಟನೆಗಳ ಪ್ರಮುಖರ ಮನೆಗಳಿಗೆ ಪೊಲೀಸರು ತೆರಳಿ ಅವರ ಜತೆ ಫೋಟೋ ತೆಗೆದಿದ್ದರು. ಈ ಘಟನೆಯನ್ನು ಖಂಡಿಸಿ ಕಡಬ ಠಾಣೆಯ ಎದುರು ಜೂ.4ರಂದು ಸಂಜೆ ಪ್ರತಿಭಟನೆ ನಡೆಸಲಾಗಿದ್ದು, ನವೀನ್ ನೆರಿಯ ಅವರು ಭಾಷಣ ಮಾಡಿದ್ದರು. ಈ ಘಟನೆಯ ಬಗ್ಗೆ ದ್ವೇಷ ಭಾಷಣ ಮಾಡಿ ಕೋಮು ಸಾಮರಸ್ಯಕ್ಕೆ ಧಕ್ಕೆ ಮಾಡಲಾಗಿದೆ ಎಂದು ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದನ್ನು ಪ್ರಶ್ನಿಸಿ ನವೀನ್ ನೆರಿಯ ಅವರು ಖ್ಯಾತ ವಕೀಲ ಅರುಣ್ ಶ್ಯಾಮ್ ಅವರ ಮೂಲಕ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಈ ಬಗ್ಗೆ ವಿಚಾರಣೆ ನಡೆದು, ನ.12ರಂದು ಹೈಕೋರ್ಟ್ ಅವರ ವಿರುದ್ದ ದಾಖಲಾಗಿದ್ದ ಎಫ್ ಐ ಆ‌ರ್ ನ್ನು ರದ್ದುಗೊಳಿಸಿ ಆದೇಶನೀಡಿದೆ.

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ಸಾಮಾನ್ಯ ಸಭೆ

Suddi Udaya

ಮಾ.2: ಭಾರತ್ ಬ್ಯಾಂಕ್ ಮುಂಬೈ ಇದರ ಬೆಳ್ತಂಗಡಿ ಕಚೇರಿ ಆರಂಭ: ಕೇಂದ್ರ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕೃತ ಉದ್ಘಾಟನೆ

Suddi Udaya

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

Suddi Udaya

ಯೂಥ್ ಫಾರ್ ಸೇವಾ ಸಂಸ್ಥೆ ವತಿಯಿಂದ ಮೇಲಂತಬೆಟ್ಟು ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕೊಡಗು ಪ್ರವಾಸ

Suddi Udaya
error: Content is protected !!