July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು : ನಿರ್ಮಾಣವಾಗದ ರಸ್ತೆ, ಸಾರ್ವಜನಿಕರ ಆಕ್ರೋಶ, ಗ್ರಾಮಸ್ಥರೇ ಸೇರಿ ಪರ್ಯಾಯ ರಸ್ತೆ ನಿರ್ಮಾಣ

ಬೆಳ್ತಂಗಡಿ : ನಾವೂರು ಗ್ರಾಮದಲ್ಲಿ ಹೊಡಿಕ್ಕಾರು ಸಂಪರ್ಕ ರಸ್ತೆಯ ತೀರಾ ಹದಗೆಟ್ಟಿದ್ದು ಕಾಮಗಾರಿಯ ಕೆಲಸವು ಕಳೆದ 6 ವರ್ಷಗಳ ಹಿಂದೆ ಪ್ರಾರಂಭಗೊಂಡು ಇಲ್ಲಿಯವರೆಗೂ ಪೂರ್ಣಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಾರಂಭದಲ್ಲಿ ತ್ವರಿತಗತಿಯಲ್ಲಿ ಕೆಲಸವನ್ನು ಮಾಡುವುದಾಗಿ ತಿಳಿಸಿರುವ ಗುತ್ತಿಗೆದಾರ 6 ವರ್ಷಗಳು ಕಳೆದರೂ ಇಲ್ಲಿಯವರೆಗೆ ಕಾಮಗಾರಿಯನ್ನು ಆಮೆಗತಿಯಲ್ಲಿ ಮಾಡಿಕೊಂಡು ಬಂದಿರುತ್ತಾರೆ. ಹಿಂದಿನ ಡಾಂಬರು ರಸ್ತೆಯನ್ನು ಅಗೆದು ಜಲ್ಲಿಯನ್ನು ಹಾಕಿ ಹೋದವರು ಇಲ್ಲಿಯವರೆಗೆ ಕಾಮಗಾರಿ ಪ್ರಾರಂಭ ಮಾಡಿರುವುದಿಲ್ಲ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಜಲ್ಲಿ ಹಾಕಿದ ರಸ್ತೆಯ ಬಳಿ ಪರ್ಯಾಯ ರಸ್ತೆ ನಿರ್ಮಾಣ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಊರಿನ ಜನರೇ ಹಣ ಸಂಗ್ರಹಿಸಿ ರಸ್ತೆ ನಿರ್ಮಾಣ ಮಾಡಿದ್ದಾರೆ. ಹಾಗೆಯೇ ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಚುನಾವಣೆಯನ್ನು ಬಹಿಷ್ಕರಿಸಲು ತೀರ್ಮಾನಿಸಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕಿನ ‘ಸಿ’ ಪ್ರವರ್ಗದ 16 ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ – ಮಡಂತ್ಯಾರು ಗ್ರಾಮ ಸಮಿತಿ ರಚನೆ

Suddi Udaya

ಎಸ್‌ಎಮ್‌ಎ: ಉತ್ತಮ ಸಮುದಾಯ ಅಭಿಯಾನ ಪ್ರಯುಕ್ತ ಬೆಳ್ತಂಗಡಿಯಲ್ಲಿ ಕಮ್ಯೂನಿಟಿ ಡಿಬೇಟ್ ಕಾರ್ಯಕ್ರಮ

Suddi Udaya

ಆ.15-16: ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಕ್ಷಕ ನಮನ 2025, ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿವೇತನ ವಿತರಣೆ

Suddi Udaya
error: Content is protected !!