23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು : ನಿರ್ಮಾಣವಾಗದ ರಸ್ತೆ, ಸಾರ್ವಜನಿಕರ ಆಕ್ರೋಶ, ಗ್ರಾಮಸ್ಥರೇ ಸೇರಿ ಪರ್ಯಾಯ ರಸ್ತೆ ನಿರ್ಮಾಣ

ಬೆಳ್ತಂಗಡಿ : ನಾವೂರು ಗ್ರಾಮದಲ್ಲಿ ಹೊಡಿಕ್ಕಾರು ಸಂಪರ್ಕ ರಸ್ತೆಯ ತೀರಾ ಹದಗೆಟ್ಟಿದ್ದು ಕಾಮಗಾರಿಯ ಕೆಲಸವು ಕಳೆದ 6 ವರ್ಷಗಳ ಹಿಂದೆ ಪ್ರಾರಂಭಗೊಂಡು ಇಲ್ಲಿಯವರೆಗೂ ಪೂರ್ಣಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಾರಂಭದಲ್ಲಿ ತ್ವರಿತಗತಿಯಲ್ಲಿ ಕೆಲಸವನ್ನು ಮಾಡುವುದಾಗಿ ತಿಳಿಸಿರುವ ಗುತ್ತಿಗೆದಾರ 6 ವರ್ಷಗಳು ಕಳೆದರೂ ಇಲ್ಲಿಯವರೆಗೆ ಕಾಮಗಾರಿಯನ್ನು ಆಮೆಗತಿಯಲ್ಲಿ ಮಾಡಿಕೊಂಡು ಬಂದಿರುತ್ತಾರೆ. ಹಿಂದಿನ ಡಾಂಬರು ರಸ್ತೆಯನ್ನು ಅಗೆದು ಜಲ್ಲಿಯನ್ನು ಹಾಕಿ ಹೋದವರು ಇಲ್ಲಿಯವರೆಗೆ ಕಾಮಗಾರಿ ಪ್ರಾರಂಭ ಮಾಡಿರುವುದಿಲ್ಲ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಜಲ್ಲಿ ಹಾಕಿದ ರಸ್ತೆಯ ಬಳಿ ಪರ್ಯಾಯ ರಸ್ತೆ ನಿರ್ಮಾಣ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಊರಿನ ಜನರೇ ಹಣ ಸಂಗ್ರಹಿಸಿ ರಸ್ತೆ ನಿರ್ಮಾಣ ಮಾಡಿದ್ದಾರೆ. ಹಾಗೆಯೇ ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಚುನಾವಣೆಯನ್ನು ಬಹಿಷ್ಕರಿಸಲು ತೀರ್ಮಾನಿಸಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Related posts

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದ ತುಕಾರಾಮ ಸಾಲಿಯಾನ್ ಸೇವಾ ನಿವೃತ್ತಿ

Suddi Udaya

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಒಕ್ಕೂಟಗಳ ಪದಗ್ರಹಣ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು‌ ಕಳ್ಳತನ:

Suddi Udaya

ರೂ.2.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ ಸಿಂಧೂರ: ಜೂ. 20 ರಂದು ಲೋಕಾರ್ಪಣೆಗೊಳ್ಳಲಿದೆಪತ್ರಿಕಾಗೋಷ್ಠಿಯಲ್ಲಿ ಅನಂತ ಭಟ್ ಮಚ್ಚಿಮಲೆ ಹೇಳಿಕೆ

Suddi Udaya
error: Content is protected !!