23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ ಪ್ಯಾಕ್ಸ್ ಅಧ್ಯಕ್ಷರಾಗಿ ಸೇಸಪ್ಪ ಸಾಲಿಯಾನ್, ಉಪಾಧ್ಯಕ್ಷರಾಗಿ ಮೋಹನ್ ಗೌಡ ಅಜಿರ ಆಯ್ಕೆ

ಬಾರ್ಯ: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳು 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರು. ಇದೀಗ ಮುಂದಿನ ಎರಡುವರೆ ವರ್ಷಗಳ ಕಾಲ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸೇಸಪ್ಪ ಸಾಲಿಯಾನ್, ಉಪಾಧ್ಯಕ್ಷರಾಗಿ ಮೋಹನ್ ಗೌಡ ಅಜಿರ ಅವಿರೋಧವಾಗಿ ನ.14 ರಂದು ಆಯ್ಕೆಯಾದರು.

ನಿರ್ದೇಶಕರಾಗಿ ಪ್ರಸನ್ನ ಗೌಡ ಎನ್, ಪ್ರವೀಣ ರೈ ಪಿ., ಪ್ರಶಾಂತ್ ಪೈ, ಚಂದ್ರಶೇಖರ್ ಕುಂಡಡ್ಕ, ಹರ್ಷಿತ್ ಪೂಜಾರಿ ಕಲಾಯ, ರಾಜೇಶ್ ರೈ ಹೆನ್ನಡ್ಕ, ಸವಿತಾ ವೆಂಕಟೇಶ್, ಹೇಮಾವತಿ ಸುರೇಶ್ ಹೇರಾಜೆ, ಶಿವಾರಮ್ ಕೆಳಗಿನಂಗಡಿ ಹಾಗೂ ಸುರೇಶ್ ಸುಣ್ಣಾಜೆ ಆಯ್ಕೆಯಾಗಿದ್ದಾರೆ.

ಸಿಡಿಒ ಪ್ರತಿಮಾ ಹಾಗೂ ಸಹಾಯಕ ಚುನಾವಣಾಧಿಕಾರಿ ಸತೀಶ್ ಟಿ.ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಿದರು. ಬ್ಯಾಂಕಿನ ಸಿಬ್ಬಂದಿಗಳು ಸಹಕರಿಸಿದರು. ಚುನಾವಣಾ ಉಸ್ತುವಾರಿ ವೇಣೂರು ಪ್ಯಾಕ್ಸ್ ಅಧ್ಯಕ್ಷ ಸುಂದರ ಹೆಗ್ಡೆ ಬಿ.ಇ., ಕಣಿಯೂರು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೆಂಕ್ಯಾರ್ ಸಹಿತ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಟೀಮ್ ಸತ್ಯಜಿತ್‌ ಸುರತ್ಕಲ್ ತಂಡದಿಂದ ಬೃಹತ್ ಜನಾಗ್ರಹ ಸಭೆಯ ಪೂರ್ವಭಾವಿ ಸಭೆ

Suddi Udaya

ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ

Suddi Udaya

ಆಗುಂಬೆ ವರ್ಗಾವಣೆ ಆದೇಶ ರದ್ದು: ಉಜಿರೆ ಗ್ರಾ.ಪಂ ಪಿಡಿಒ ಆಗಿ ಪಿ.ಹೆಚ್. ಪ್ರಕಾಶ್ ಶೆಟ್ಟಿ ಮುಂದುವರಿಕೆ

Suddi Udaya

ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ವಾಲಿಬಾಲ್ ಪಂದ್ಯಾಟ: ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ಅತ್ಯುತ್ತಮ ಸೆಟ್ಟರ್ ಆಗಿ ಆಯ್ಕೆ

Suddi Udaya
error: Content is protected !!