ಬೆಳ್ತಂಗಡಿ: ವಿಶ್ವವಿಖ್ಯಾತ ಪರಿಸರವಾದಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ(114ವ) ರವರು ಇಂದು ನಿಧನ ಹೊಂದಿದ್ದಾರೆ ಎಂದು ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ತಿಮ್ಮಕ್ಕ ಅವರನ್ನು ವಯೋ ಸಹಜ ಅನಾರೋಗ್ಯ ಮತ್ತು ಹಸಿವಿನ ಕೊರತೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದರು ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ಮೃತಟಪಟ್ಟಿದ್ದಾರೆ..
1911 ರಲ್ಲಿ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕ, ಹೆದ್ದಾರಿಗಳ ಪಕ್ಕದಲ್ಲಿ 8,000 ಕ್ಕೂ ಹೆಚ್ಚು ಮರಗಳನ್ನು ನೆಟ್ಟು ಪೋಷಿಸುವ ದಶಕಗಳ ಕಾಲ ಪರಿಸರ ಉಸ್ತುವಾರಿಯ ಸಂಕೇತವಾಗಿದ್ದರು. ಮರಗಳನ್ನೇ ಮಕ್ಕಳಂತೆ ನೋಡಿಕೊಂಡಿದ್ದರು.











