32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಹಕಾರ ಸಪ್ತಾಹ ಕಾರ್ಯಕ್ರಮ: ಆರಂಬೋಡಿಯ ಪ್ರತಾಪ್ ಶೆಟ್ಟಿಯವರಿಗೆ ಹೈನುಗಾರಿಕೆ ಕ್ಷೇತ್ರದಲ್ಲಿ “ಕ್ಷೀರಾರತ್ನ” ಪ್ರಶಸ್ತಿ

ಬೆಳ್ತಂಗಡಿ: ದ.ಕ. ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಆರಂಬೋಡಿಯ ಪ್ರತಾಪ್ ಶೆಟ್ಟಿ ಕುಂಡಾಜೆಯವರಿಗೆ “ಕ್ಷೀರಾರತ್ನ” ಪ್ರಶಸ್ತಿ ನೀಡಿ ಗೌರವಿಸಿದೆ.

ಪ್ರತಾಪ್ ಶೆಟ್ಟಿ ಕುಂಡಾಜೆಯವರು ಪ್ರಸ್ತುತ ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷರಾಗಿದ್ದು, ಆರಂಬೋಡಿ ಗ್ರಾಮದ ಕುಂಡಾಜೆ ಶ್ರೀಮತಿ ಸುನಂದಾ ಮತ್ತು ಸಂಜೀವ ಶೆಟ್ಟಿ ದಂಪತಿ ಪುತ್ರ.

ಇವರು ಆಟೋಮೋಬೈಲ್ ವೃತ್ತಿ ಶಿಕ್ಷಣ ಪಡೆದಿದ್ದು, ಬೆಂಗಳೂರು ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಅದನ್ನು ತ್ಯಜಿಸಿ ತನ್ನ ಊರಿಗೆ ಮರಳಿ ಕೃಷಿ ಮತ್ತು ಹೈನುಗಾರಿಕೆಯನ್ನು ಪ್ರಾರಂಭಿಸಿ ಪ್ರಸ್ತುತ ಪ್ರತಿ ದಿನಾ ಸರಾಸರಿ 100 ಲೀಟರ್‌ಗಿಂತಲು ಅಧಿಕ ಹಾಲನ್ನು ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಪೂರೈಸುತ್ತಿದ್ದಾರೆ.

ಸುಮಾರು 15 ಉತ್ತಮ ಜಾತಿಯ ತಳಿಗಳನ್ನು ಸಾಕುತ್ತಿರುವ ಇವರು ಹೈನುಗಾರಿಕೆಯೊಂದಿಗೆ ಅಡಿಕೆ ಕೃಷಿ, ತೆಂಗು ಕೃಷಿಯನ್ನು ಮಾಡುತ್ತಿದ್ದೂ ಉಳಿದ ಯುವಕರಿಗೆ ಪ್ರತಾಪ್ ಶೆಟ್ಟಿ ಪ್ರೇರಣೆಯಾಗಿದ್ದಾರೆ. ಇವರಿಗೆ ಬೆಂಬಲವಾಗಿ ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ಕಾರ್ಯದರ್ಶಿ, ನಿರ್ದೇಶಕರುಗಳು ಸಾಥ್ ನೀಡುತ್ತಿದ್ದಾರೆ

Related posts

ಲಾಯಿಲ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕೋರ್ಟ್ ಗೆ ವರದಿ ಸಲ್ಲಿಕೆ: ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾಗಿರುವುದು ಧೃಡ

Suddi Udaya

ಲಾಯಿಲ : ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪಿಲಿ ನಲಿಕೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಯೋಗ ದಿನಾಚರಣೆ ಹಾಗೂ ಯೋಗ ಸಪ್ತಾಹದ ಉದ್ಘಾಟನೆ

Suddi Udaya

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
error: Content is protected !!