September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ವೇದಿಕೆಯಲ್ಲಿ, ಪ್ರಾಂಶುಪಾಲ ವಂ.ಫಾ ವಿಜಯ್ ಲೋಬೋ, ಶಾಲಾ ನಾಯಕಿಯರಾದ ಸಿಂಚನ ಮತ್ತು ಮಿಷೆಲ್ ಪಿಂಟೊ ಉಪಸ್ಥಿತರಿದ್ದರು.

ಮುಖ್ಯ ಅತಿಥಿ ಪ್ರಭಾತ ಸ್ಟೋರ್ ಮಾಲಕ ಪ್ರವೀಣ್ ಭಟ್ ಮಾತನಾಡಿ ಮಕ್ಕಳು ನಮ್ಮ ರಾಷ್ಟ್ರದ ಭವಿಷ್ಯ. ಅವರಲ್ಲಿ ಸೃಜನಶೀಲತೆ, ಮೌಲ್ಯಗಳು ಹಾಗೂ ಆತ್ಮವಿಶ್ವಾಸ ಬೆಳೆಸುವುದು ಶಾಲೆಯ ಹೊಣೆಗಾರಿಕೆ ಎಂದು ಹೇಳಿದರು.

ಶಾಲಾ ಸಂಚಾಲಕ ವಂ.ಫಾ. ಅಬೆಲ್ ಲೋಬೊ ಮಕ್ಕಳ ದಿನಾಚರಣೆಯ ಶುಭ ಸಂದೇಶವನ್ನು ನೀಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರಿಂದ ಮಕ್ಕಳಿಗೆ ವಿಶೇಷವಾಗಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲಾಗಿದ್ದು, ಶಾಲಾ ವಾರ್ಷಿಕೋತ್ಸವದ ಅಂಗವಾಗಿ ನಡೆಸಲಾದ ಸ್ಪರ್ಧೆಯಲ್ಲಿ ವಿಜೇತರಾದವರನ್ನು ಪ್ರಶಸ್ತಿ ಹಾಗೂ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಯಿತು.

ಶಿಕ್ಷಕರು ಹಾಗೂ ಸಿಬ್ಬಂದಿಗಳು ಸಹಕರಿಸಿದರು. ಸಹಶಿಕ್ಷಕಿಯರಾದ ಕೀರ್ತಿಕ ಸ್ವಾಗತಿಸಿ, ನಿಶಾ ನಿರೂಪಿಸಿ, ರಕ್ಷಾ ವಂದಿಸಿದರು.

Related posts

ಶಿಶಿಲ: ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯೆಯರಿಂದ ನೇಜಿ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರಪತಿ ಕಾಲೇಜಿಗೆ ವಿಶೇಷ ಶಾಶ್ವತ ದೀಪಾಲಂಕಾರ

Suddi Udaya

ಮೊಗ್ರು: ಮುಗೇರಡ್ಕ ವ್ಯಾಪ್ತಿಯಲ್ಲಿ ಅಡಿಕೆ ತೋಟಗಳು ಜಲಾವೃತ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ ಹಾಗೂ ಆಟಿದ ಕೂಟ

Suddi Udaya

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
error: Content is protected !!