September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಮಹಿಳಾ ಟೇಬಲ್ ಟೆನ್ನಿಸ್ ಚಾಂಪಿಯನ್

ಉಜಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ಜೆ.ಜೆ. ಮೆಡಿಕಲ್ ಕಾಲೇಜ್, ದಾವಣಗೆರೆ ಇವರ ಆಶ್ರಯದಲ್ಲಿ ನಡೆದ ಅಂತರ್ವಲಯ ಮಟ್ಟದ ಮಹಿಳೆಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟ ಕೈಸೇರಿಸಿಕೊಂಡಿದೆ.

ಸೆಮಿಫೈನಲ್ ಪಂದ್ಯದಲ್ಲಿ ಉಜಿರೆಯ ತಂಡವು ಸಪ್ತಗಿರಿ ಮೆಡಿಕಲ್ ಕಾಲೇಜ್, ಬೆಂಗಳೂರಿನ ತಂಡವನ್ನು 3–0 ಅಂತರದಲ್ಲಿ ಮಣಿಸಿ ಫೈನಲ್‌ಗೆ ಪ್ರವೇಶಿಸಿತು. ನಂತರ ನಡೆದ ಅಂತಿಮ ಘಟ್ಟದಲ್ಲಿ ಆರ್.ಆರ್. ಅಂಬೇಡ್ಕರ್ ಮೆಡಿಕಲ್ ಕಾಲೇಜ್, ಕಲ್ಬುರ್ಗಿ ತಂಡವನ್ನು 3–1 ಸೆಟ್‌ಗಳಿಂದ ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಸ್ಪರ್ಧೆಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಉಜಿರೆ ಕಾಲೇಜಿನ ಎರಡು ವಿದ್ಯಾರ್ಥಿನಿಯರು ದಕ್ಷಿಣ ಭಾರತ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ ಎಂಬುದು ಕಾಲೇಜು ವಲಯದಲ್ಲಿ ಹರ್ಷವನ್ನುಂಟುಮಾಡಿದೆ.

ಕಾಲೇಜಿನ ಪ್ರಾಂಶುಪಾಲರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ತಂಡದ ಸಾಧನೆಯನ್ನು ಶ್ಲಾಘಿಸಿದ್ದಾರೆ.

Related posts

ಅಜ್ಜ–ಅಜ್ಜಿಯರೊಂದಿಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯಾರ್ಥಿಗಳ ಆತ್ಮೀಯ ಸಮಾಗಮ

Suddi Udaya

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆಗಾಗಿ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ಬೆಳ್ತಂಗಡಿ ನಿಯೋಗ

Suddi Udaya

ಮಧ್ಯಾಂತರ ಸಮ್ಮೇಳನದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ‘ಎಕ್ಸೆಲೆನ್ಸ್ ಅವಾರ್ಡ್’ ಹಾಗೂ ‘ಗೋಲ್ಡನ್ ಸ್ಟಾರ್ ಪ್ರೆಸಿಡೆಂಟ್’ ಪ್ರಶಸ್ತಿ

Suddi Udaya

ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಶೇಖರ್ ಲಾಯಿಲ ಪಂಚಾಯತ್ ಸಭಾಭವನದ ಎದುರು ನಿದ್ದೆ ಮಾಡುವ ಮೂಲಕ ಆಕ್ರೋಶ

Suddi Udaya

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

Suddi Udaya
error: Content is protected !!