23.3 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಟ್ಟದಬೈಲು ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿಯ ನೂತನ ಅಧ್ಯಕ್ಷರಾಗಿ ರತ್ನಾಕರ ಆಚಾರ್ಯ ಉಪಾಧ್ಯಕ್ಷರಾಗಿ ದೀಪಾ ಎಸ್ ಮೇಚೆರಿ ಆಯ್ಕೆ

ಬೆಳ್ತಂಗಡಿ: ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಕಟ್ಟದಬೈಲು, ಓಡಿಲ್ನಾಳ ಇದರ ಶಾಲಾಭಿವೃದ್ದಿ ಸಮಿತಿಯ ನೂತನ ಅಧ್ಯಕ್ಷರಾಗಿ ರತ್ನಾಕರ ಆಚಾರ್ಯ ಕಲ್ಲೋಟ್ಟು ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ದೀಪಾ ಎಸ್ ಮೇಚೆರಿ ಆಯ್ಕೆಯಾಗಿದ್ದಾರೆ.

ನೂತನವಾಗಿ ಆಯ್ಕೆಯಾದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಶಾಲೆಯ ಬಹು ಮುಖ್ಯ ಆಶೋತ್ತರಗಳ ಈಡೇರಿಕೆಗಾಗಿ ಶ್ರಮಿಸುತ್ತೇನೆಂದು ಭರವಸೆ ನೀಡಿದರು.

ಸರ್ಕಾರದ ಸುತ್ತೋಲೆಯಂತೆ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಕಟ್ಟದಬೈಲು ಇಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಪೋಷಕ ಶಿಕ್ಷಕರ ಮಹಾಸಭೆ ನಡೆಯಿತು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪ್ರಭಾರ ಮುಖ್ಯೋಪಾಧ್ಯಾಯಿನಿ ಶ್ರೀಮತಿ. ಶಾಂತಿ ಡಿಸೋಜ ಇವರು ನೀಡಿದರು. ನಿರೂಪಣೆಯನ್ನು ಆಂಗ್ಲ ಭಾಷಾ ಪದವೀಧರ ಶಿಕ್ಷಕರಾದ ಎಮ್.ವಿ ಹಿರೇಮಠ ಇವರು ಮಾಡಿದರು. ಮಕ್ಕಳ ಹಕ್ಕುಗಳ ಬಗ್ಗೆ ಪದವೀಧರ ಶಿಕ್ಷಕಿಯಾದ ಶ್ರೀಮತಿ ಭವ್ಯ ಇವರು ಪೋಷಕರಿಗೆ ಮಾಹಿತಿ ನೀಡಿದರು.

ವರ್ಗಾವಣೆಗೊಂಡ ಸಹ ಶಿಕ್ಷಕ ಪಿ ಶಿವಾನಂದ ಭಂಡಾರಿ, ಸಹ ಶಿಕ್ಷಕಿ ಶ್ರೀಮತಿ ಜಯಶ್ರೀ, ವಯೋ ನಿವೃತ್ತಿ ಹೊಂದಿದ ಅಡುಗೆ ಸಹಾಯಕಿ ಶ್ರೀಮತಿ ಡೀಕಮ್ಮ ಮತ್ತು ಮಾಜಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿದ್ದ ಶೇಖರ ಪೆಜತ್ತಕಾಡು ಇವರಿಗೆ ಶಾಲೆಯ ಪರವಾಗಿ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಗೌರವ ಶಿಕ್ಷಕಿಯರಾದ ಶ್ರೀಮತಿ ಭಾಗೀರಥಿ, ಶ್ರೀಮತಿ ಅಶ್ವಿನಿ ಮತ್ತು ಶ್ರೀಮತಿ ಜಯಶ್ರೀ ಇವರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

Related posts

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

Suddi Udaya

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

Suddi Udaya

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

Suddi Udaya

ಕನ್ಯಾಡಿ: ಬಸ್ ಹಾಗೂ ಕಾರಿನ ನಡುವೆ ಅಪಘಾತ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವರಿಗೆ ಬೆಂಗಳೂರಿನ ನಾಗೇಂದ್ರ ಶಾಸ್ತ್ರೀರವರಿಂದ 108 ಲೀಟರ್ ಹಾಲಿನಿಂದ ಅಭಿಷೇಕ

Suddi Udaya

ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದಿಂದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya
error: Content is protected !!