September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

ಬೆಳ್ತಂಗಡಿ: ಹಿಂದೂ ಮುಖಂಡರ ಮನೆಗಳಿಗೆ ತಡರಾತ್ರಿ ಪೋಲಿಸರು ತೆರಳಿ ಫೋಟೋ ತೆಗೆಯುತ್ತಿದ್ದ ಘಟನೆಗೆ ಸಂಬಂಧಿಸಿ, ಜೂ.4ರಂದು ಕಡಬ ಠಾಣೆಯ ಮುಂದೆ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿ.ಹಿಂ.ಪ. ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿ ದ್ವೇಷಭಾಷಣ ಮಾಡಿದ್ದಕ್ಕೆ ಕಡಬ ಠಾಣೆಯಲ್ಲಿ ದಾಖಲಾಗಿದ್ದ ಎಫ್.ಐ.ಆರ್.ನ್ನು ಹೈಕೋರ್ಟ್ ನ.12ರಂದು ವಜಾಗೊಳಿಸಿದೆ.

ತಡರಾತ್ರಿ ಸಂಘಟನೆಗಳ ಪ್ರಮುಖರ ಮನೆಗಳಿಗೆ ಪೊಲೀಸರು ತೆರಳಿ ಅವರ ಜತೆ ಫೋಟೋ ತೆಗೆದಿದ್ದರು. ಈ ಘಟನೆಯನ್ನು ಖಂಡಿಸಿ ಕಡಬ ಠಾಣೆಯ ಎದುರು ಜೂ.4ರಂದು ಸಂಜೆ ಪ್ರತಿಭಟನೆ ನಡೆಸಲಾಗಿದ್ದು, ನವೀನ್ ನೆರಿಯ ಅವರು ಭಾಷಣ ಮಾಡಿದ್ದರು. ಈ ಘಟನೆಯ ಬಗ್ಗೆ ದ್ವೇಷ ಭಾಷಣ ಮಾಡಿ ಕೋಮು ಸಾಮರಸ್ಯಕ್ಕೆ ಧಕ್ಕೆ ಮಾಡಲಾಗಿದೆ ಎಂದು ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದನ್ನು ಪ್ರಶ್ನಿಸಿ ನವೀನ್ ನೆರಿಯ ಅವರು ಖ್ಯಾತ ವಕೀಲ ಅರುಣ್ ಶ್ಯಾಮ್ ಅವರ ಮೂಲಕ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಈ ಬಗ್ಗೆ ವಿಚಾರಣೆ ನಡೆದು, ನ.12ರಂದು ಹೈಕೋರ್ಟ್ ಅವರ ವಿರುದ್ದ ದಾಖಲಾಗಿದ್ದ ಎಫ್ ಐ ಆ‌ರ್ ನ್ನು ರದ್ದುಗೊಳಿಸಿ ಆದೇಶನೀಡಿದೆ.

Related posts

ಪವಿತ್ರ ಹೃದಯ ಭಗೀನಿಯರ ಸಭೆ: ಬೆಳ್ತಂಗಡಿ ಧರ್ಮ ಪ್ರಾಂತ್ಯವಲಯಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ

Suddi Udaya

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

Suddi Udaya

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಕರಂಬಾರು: ಬೂಟ್ಟೆಲ್ಮಾರ್ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ಅಭಿವೃದ್ಧಿಗೆ ರೂ.1 ಲಕ್ಷ ಡಿ.ಡಿ. ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾರಾಯಣ ಪ್ರಭು ರವರಿಗೆ ಶ್ರದ್ಧಾಂಜಲಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!