ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು : ನಿರ್ಮಾಣವಾಗದ ರಸ್ತೆ, ಸಾರ್ವಜನಿಕರ ಆಕ್ರೋಶ, ಗ್ರಾಮಸ್ಥರೇ ಸೇರಿ ಪರ್ಯಾಯ ರಸ್ತೆ ನಿರ್ಮಾಣ

ಬೆಳ್ತಂಗಡಿ : ನಾವೂರು ಗ್ರಾಮದಲ್ಲಿ ಹೊಡಿಕ್ಕಾರು ಸಂಪರ್ಕ ರಸ್ತೆಯ ತೀರಾ ಹದಗೆಟ್ಟಿದ್ದು ಕಾಮಗಾರಿಯ ಕೆಲಸವು ಕಳೆದ 6 ವರ್ಷಗಳ ಹಿಂದೆ ಪ್ರಾರಂಭಗೊಂಡು ಇಲ್ಲಿಯವರೆಗೂ ಪೂರ್ಣಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಾರಂಭದಲ್ಲಿ ತ್ವರಿತಗತಿಯಲ್ಲಿ ಕೆಲಸವನ್ನು ಮಾಡುವುದಾಗಿ ತಿಳಿಸಿರುವ ಗುತ್ತಿಗೆದಾರ 6 ವರ್ಷಗಳು ಕಳೆದರೂ ಇಲ್ಲಿಯವರೆಗೆ ಕಾಮಗಾರಿಯನ್ನು ಆಮೆಗತಿಯಲ್ಲಿ ಮಾಡಿಕೊಂಡು ಬಂದಿರುತ್ತಾರೆ. ಹಿಂದಿನ ಡಾಂಬರು ರಸ್ತೆಯನ್ನು ಅಗೆದು ಜಲ್ಲಿಯನ್ನು ಹಾಕಿ ಹೋದವರು ಇಲ್ಲಿಯವರೆಗೆ ಕಾಮಗಾರಿ ಪ್ರಾರಂಭ ಮಾಡಿರುವುದಿಲ್ಲ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಜಲ್ಲಿ ಹಾಕಿದ ರಸ್ತೆಯ ಬಳಿ ಪರ್ಯಾಯ ರಸ್ತೆ ನಿರ್ಮಾಣ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಊರಿನ ಜನರೇ ಹಣ ಸಂಗ್ರಹಿಸಿ ರಸ್ತೆ ನಿರ್ಮಾಣ ಮಾಡಿದ್ದಾರೆ. ಹಾಗೆಯೇ ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಚುನಾವಣೆಯನ್ನು ಬಹಿಷ್ಕರಿಸಲು ತೀರ್ಮಾನಿಸಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Related posts

ಚುನಾವಣಾ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ : ಎ.17 ಸೋಮವಾರ ಬೆಳ್ತಂಗಡಿ ಸಂತೆಕಟ್ಟೆ‌ಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಧರ್ಮಸ್ಥಳ – ಮುಂಡಾಜೆ ಸಂಪರ್ಕ ರಸ್ತೆಯಲ್ಲಿ 3 ನೂತನ ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

Suddi Udaya

ನಡ: ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya
error: Content is protected !!