ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ಅಧ್ಯಕ್ಷತೆಯನ್ನು ಶಾಲಾ ಮುಖ್ಯಶಿಕ್ಷಕ ಶೀನಪ್ಪ ಗೌಡ ವಹಿಸಿ, ಮಕ್ಕಳ ದಿನಾಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.
ಮುಖ್ಯ ಅತಿಥಿ ಪುದುವೆಟ್ಟು ಗ್ರಾಮದ ಪ್ರಗತಿಪರ ಕೃಷಿಕ ದಿವಾಕರ ಗೌಡ ಮುಚ್ಚಾರು ಮಾತನಾಡಿ ಮಕ್ಕಳ ದಿನಾಚರಣೆ ಎಂದರೆ ಮಕ್ಕಳಿಗೆ ಒಂದು ಸಂತೋಷದ ದಿನ ಈ ದಿನವನ್ನು ಎಲ್ಲಾ ವಿದ್ಯಾರ್ಥಿಗಳು ಸಂತೋಷದಿಂದ ಕಳೆಯಬೇಕು ಎಂದು ಅಭಿಪ್ರಾಯಪಟ್ಟರು.

ಶಿಕ್ಷಕ ಗೌರೀಶ್ ಇವರು ಮಕ್ಕಳ ದಿನಾಚರಣೆಯ ಹಿನ್ನೆಲೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳಿಗೆ ಆಯೋಜಿಸಲಾಗಿದ್ದ ಗೂಡುದೀಪ ಸ್ಪರ್ಧೆ ಹಾಗೂ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು.
ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಿಕ್ಷಕರಾದ ನಿಶಾಂತ್ ಕುಮಾರ್ ಸ್ವಾಗತಿಸಿ, ಕುಮಾರಿ ಜಿತಿಕ್ಷ ವಂದಿಸಿ, ಶೀಲಾ ಎನ್ ರವರು ನಿರೂಪಿಸಿದರು. ಬಹುಮಾನ ವಿತರಣಾ ಕಾರ್ಯಕ್ರಮವನ್ನು ಪುಷ್ಪಲತಾ ನೆರವೇರಿಸಿದರು.











