22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಪಿಕೋತ್ಸವ ಹಾಗೂ ಪ್ರೌಢಶಾಲೆಯ ಬೆಳ್ಳಿ ಮಹೋತ್ಸವದ ಸಮಾರೋಪ

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆ, ಹಳೆಕೋಟೆ ಇಲ್ಲಿಯ ಪ್ರೌಢಶಾಲೆಯ ಬೆಳ್ಳಿ ಮಹೋತ್ಸವದ ಸಮಾರೋಪ ಮತ್ತು ವಾರ್ಷಿಕೋತ್ಸವ ಕಾರ್ಯಕ್ರಮವು ನ.14ರಂದು ಶಾಲಾ ಆವರಣದಲ್ಲಿ ಜರುಗಿತು.

ವಾಣಿ ಶಿಕ್ಷಣ ಸಂಸ್ಥೆಗಳ ಗೌರವ ಅಧ್ಯಕ್ಷ ಎಚ್. ಪದ್ಮ ಗೌಡ ಅಧ್ಯಕ್ಷತೆಯನ್ನು ವಹಿಸಿದ್ದರು. ಗೌರವ ಅತಿಥಿಗಳಾಗಿ ಅಂಕಣಕಾರ ಆದರ್ಶ ಗೋಖಲೆ, ವಾಣಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಗಣೇಶ್ ಗೌಡ ಆಗಮಿಸಿದರು.

ವೇದಿಕೆಯಲ್ಲಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಲಕ್ಷ್ಮಿನಾರಾಯಣ ಕೆ, ಶೇಖರ್ ಶೆಟ್ಟಿ, ಕೃಷ್ಣಪ್ಪ ಗೌಡ ದೇವಸ್ಯ, ಪ್ರಸಾದ್ ಕುಮಾರ್, ವಾಣಿ ಪಿಯು ಕಾಲೇಜು ಪ್ರಾಂಶುಪಾಲ ವಿಷ್ಣುಪ್ರಕಾಶ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುಹಾಸಿನಿ ಎ, ಶಾಲಾ ವಿದ್ಯಾರ್ಥಿ ನಾಯಕಿ ಮನೀಷಾ ಎಂ.ಎನ್ ಉಪಸ್ಥಿತರಿದ್ದರು.

2024-25ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಶಾಲಾ ಮುಖ್ಯ ಶಿಕ್ಷಕ ಲಕ್ಷ್ಮಿನಾರಾಯಣ ಕೆ ಪ್ರಸ್ತಾವಿಸಿ ಸ್ವಾಗತಿಸಿದರು. ಮನಿಷಾ ಮತ್ತು ತಂಡ ಪ್ರಾರ್ಥಿಸಿದರು. ಶಿಕ್ಷಕಿಯರಾದ ವಿಜೇತಾ ಮತ್ತು ವಂದನಾ ನಿರೂಪಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಸುಹಾಸಿನಿ ಎ ವಾರ್ಷಿಕ ವರದಿ ಮಂಡಿಸಿದರು.

Related posts

ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ

Suddi Udaya

ಪಟ್ಟಣ ಪಂಚಾಯತು ಅಧಿಕಾರಾವಧಿ ನ.7ಕ್ಕೆ ಮುಕ್ತಾಯ: ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ ಮೊಟಕು

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಗುರುವಾಯನಕೆರೆ: ನಿವೃತ್ತ ಕೆ.ಎಸ್.ಆರ್.ಟಿ.ಸಿ ಟ್ರಾಫಿಕ್ ಕಂಟ್ರೋಲರ್ ಕೃಷ್ಣ ಕಾಮತ್ ನಿಧನ

Suddi Udaya

ಡಿ.18: ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಜಿಲ್ಲಾ ಗವರ್ನರ್ ಭೇಟಿ : ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ- ಸೇವಾ ಯೋಜನೆಗಳ ಹಸ್ತಾಂತರ

Suddi Udaya

ಸುಳ್ಳೋಡಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!