23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಮಡಂತ್ಯಾರು: ಪುಂಜಾಲಕಟ್ಟೆ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ನ.13 ರಂದು ಗಾಡಿಯನ್ ಏಂಜಲ್ಸ್ ಹಿರಿಯ ಪ್ರಾಥಮಿಕ ಶಾಲೆ, ಮಡಂತ್ಯಾರಿನಲ್ಲಿ ನಡೆಯಿತು.

ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಾಥಮಿಕ ಹಂತದ ಕಿರಿಯ ವಿಭಾಗದಲ್ಲಿ 4ನೇ ತರಗತಿಯ ತನ್ಮಯ ಆರ್, ಆರುಷಿ ಪಿ ಶೆಟ್ಟಿ, ಆಶೀ ರವೀಂದ್ರ ಪೂಜಾರಿ ಹಾಗೂ ಹಿರಿಯ ವಿಭಾಗದಲ್ಲಿ 7ನೇ ತರಗತಿಯ ಆರಾಧ್ಯ, ಕೇಶ್ನಿ ಎಸ್, ಶರ್ವಿನ್ ಡಿಸೋಜ ಮತ್ತು 5ನೇ ತರಗತಿಯ ಅಚಿಂತ್ಯ ಮಡವು ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕಿರಿಯ ವಿಭಾಗದಲ್ಲಿ ಶಾನ್ ಪ್ರಥಮ್ , ಶಾರ್ವಿ, ಫಾತಿಮಾ ರಿಝ್ನಾ ದ್ವಿತೀಯ ಸ್ಥಾನವನ್ನು ಮತ್ತು ಪ್ರಣಮ್ಯ ರವರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಹಿರಿಯ ವಿಭಾಗದಲ್ಲಿ ಮಹಮ್ಮದ್ ಅನೀಕ್, ಅದಿತಿ ಎಸ್ ದ್ವಿತೀಯ ಸ್ಥಾನವನ್ನು ಮತ್ತು ರೀಶಲ್ ರಿಯೋಲ ವಾಸ್, ಜಿತೇಶ್ ರವರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಪ್ರಾಥಮಿಕ ಹಂತದ ಕಿರಿಯ ಮತ್ತು ಹಿರಿಯ ವಿಭಾಗದ ಸಮಗ್ರ ಪ್ರಶಸ್ತಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.ಇವರಿಗೆ ಶಾಲಾ ಶಿಕ್ಷಕ ವೃಂದದವರು ತರಬೇತಿಯನ್ನು ನೀಡಿರುತ್ತಾರೆ.

Related posts

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

Suddi Udaya

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಉದ್ಘಾಟನೆ; ನಂಬಿಕೆ, ಪರಂಪರೆಯ ಶ್ರೇಷ್ಠ ಸ್ವರ್ಣೋದ್ಯಮ ಸಂಸ್ಥೆ ಮುಳಿಯ: ಸಂಪತ್ ಬಿ. ಸುವರ್ಣ; 50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ಮಿತ್ತಬಾಗಿಲು: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಉಜಿರೆ: ಅರಳಿ ಮಿತ್ರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್, ಕಾರ್ಯದರ್ಶಿಯಾಗಿ ಅನಿಲ್‌ ಆಯ್ಕೆ

Suddi Udaya

ನಂದಿಬೆಟ್ಟ: ನಂದಿಕೇಶ್ವರ ಭಜನಾ ಮಂಡಳಿ ಸಮಿತಿ ರಚನೆ

Suddi Udaya
error: Content is protected !!