September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು :ಬೆಳ್ತಂಗಡಿ ಕೋಟಿ ಚೆನ್ನಯ ಕ್ರೀಡಾಕೂಟ 2025 ರ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ(ರಿ) ಬೆಳ್ತಂಗಡಿ ಆಶ್ರಯದಲ್ಲಿ ಬಿಲ್ಲವ ಮಹಿಳಾ ವೇದಿಕೆ ಯುವಬಿಲ್ಲವ ವೇದಿಕೆ ಬೆಳ್ತಂಗಡಿ ಇದರ ಸಹಕಾರದೊಂದಿಗೆ ಡಿ. 7 ರಂದು ಬೆಳ್ತಂಗಡಿ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಕೋಟಿ ಚೆನ್ನಯ ಕ್ರೀಡಾಕೂಟ 2025 ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಶಿರ್ಲಾಲು ವಠಾರದಲ್ಲಿ ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮ ಯಶಸ್ವಿಯಾಗುವಂತೆ ಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಮಾತನಾಡಿದ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ(ರಿ) ಬೆಳ್ತಂಗಡಿ ಇದರ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ಯುವ ಸಮುದಾಯದ ಸಬಲೀಕರಣಕ್ಕಾಗಿ ಈ ಕ್ರೀಡಾಕೂಟ ಆಯೋಜಿಸಲಾಗಿದೆ. ಕ್ರೀಡಾಕೂಟ ಯಶಸ್ವಿಯಾಗಿ ಸಂಪನ್ನಗೊಳ್ಳಲು ಎಲ್ಲರ ಸಹಕಾರವನ್ನು ಕೋರಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಮಾಜಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಸಿಎ ಬ್ಯಾಂಕ್ ಶಿರ್ಲಾಲು ಅಧ್ಯಕ್ಷ ಸುಧೀರ್ ಆರ್ ಸುವರ್ಣ, ಗೆಜ್ಜೆಗಿರಿ ಕ್ಷೇತ್ರದ ತಾಲೂಕು ಪ್ರಧಾನ ಸಂಚಾಲಕರಾದ ನಿತ್ಯಾನಂದ ನಾವರ, ಗರಡಿ ಆಡಳಿತ ಸಮಿತಿಯ ಗೌರವಾಧ್ಯಕ್ಷ ರಮಾನಂದ ಗುಡ್ಡಾಜೆ, ಅಧ್ಯಕ್ಷ ವಿಶ್ವನಾಥ ಸಾಲಿಯಾನ್, ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಕಟ್ಟ,ಕೋಶಾಧಿಕಾರಿ ಚಿದಾನಂದ ಇಂಚರ, ಸದಸ್ಯರುಗಳಾದ ಯಶೋಧರ ಸುವರ್ಣ ರಮೇಶ್ ಪೂಜಾರಿ ಚಂದ್ರಶೇಖರ ಸೂರ್ಲೋಡಿ,ರಮೇಶ್ ಸಿಎ ಬ್ಯಾಂಕ್,ಪ್ರಶಾಂತ್ ಇಂದ್ರಪ್ರಸ್ಥ, ನಂದ ಕುಮಾರ್, ರಮೇಶ್ ಆಚಾರಿಬೆಟ್ಟು, ದಿವಾಕರ ಜಾರಿಗೆದಡಿ, ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಶಿರ್ಲಾಲು ಅಧ್ಯಕ್ಷ ಸದಾಶಿವ ಪೂಜಾರಿ ಊರ, ಯುವಬಿಲ್ಲವ ವೇದಿಕೆ ಅಧ್ಯಕ್ಷ ಜ್ಞಾನೇಶ್ ಕುಮಾರ್, ಮಹಿಳಾ ವೇದಿಕೆಯ ಅಧ್ಯಕ್ಷ ಶೋಭ ಗೋಣಗುರಿ, ಯುವವಾಹಿನಿ ಸಂಚಾಲನ ಸಮಿತಿ ಅಧ್ಯಕ್ಷ ಯತೀಶ್ ಕರಂಬಾರು, ಬ್ರಹ್ಮ ಬೈದರ್ಕಳ ಗರಡಿ ಜಾತ್ರಾ ಸಮಿತಿಯ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಸುದಲಾಯಿ, ಕಾರ್ಯದರ್ಶಿ ಪ್ರದೀಪ್ ಪಿಜಕೊಡಂಗೆ, ಕೋಶಾಧಿಕಾರಿ ರಕ್ಷಿತ್ ಪಿಜಕೊಡಂಗೆ, ಗೆಜ್ಜೆಗಿರಿ ಗ್ರಾಮ ಸಮಿತಿಯ ಅಧ್ಯಕ್ಷರಾದ ಉಮೇಶ್ ಸುವರ್ಣ, ಕಾರ್ಯದರ್ಶಿ ಅಶೋಕ ಮಡೆಮಾರು, ಶಿವಾನಂದ ಮಜಲಪಲ್ಕೆ, ಹರೀಶ್ ನೇತ್ರಬೈಲು, ಆನಂದ ಪೂಜಾರಿ ಕರಂಬಾರು, ಹರೀಶ್ ಹೆಚ್.ಎಸ್ ಆಟೋ, ಗಿರೀಶ್ ನಿಸರ್ಗ, ಗಣೇಶ್ ಪೊಸಲಾಯಿ ಹಾಗೂ ಊರವರು ಉಪಸ್ಥಿತರಿದ್ದರು.

ಯುವಬಿಲ್ಲವ ವೇದಿಕೆ ಬೆಳ್ತಂಗಡಿ ಅಧ್ಯಕ್ಷರಾದ ಎಮ್ ಕೆ ಪ್ರಸಾದ್ ಸ್ವಾಗತಿಸಿ ಮಾಜಿ ಅಧ್ಯಕ್ಷರಾದ ಹರೀಶ್ ಕಲ್ಲಾಜೆ ಧನ್ಯವಾದವಿತ್ತರು.

Related posts

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Suddi Udaya

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

Suddi Udaya

ಬೆಳ್ತಂಗಡಿ ತಾಲೂಕಿನ 11 ಸರ್ಕಾರಿ ಶಾಲೆಗಳಗೆ ಕೆ.ಪಿ.ಎಸ್ ಸ್ಥಾನಮಾನ; ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಕಿಲ್ಲೂರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಹೋರಿ ಸಾವು

Suddi Udaya

ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಮಕ್ಕಳ ಕಲವರ ಕಾರ್ಯಕ್ರಮ

Suddi Udaya
error: Content is protected !!