July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಹಕಾರ ಸಪ್ತಾಹ ಕಾರ್ಯಕ್ರಮ: ಆರಂಬೋಡಿಯ ಪ್ರತಾಪ್ ಶೆಟ್ಟಿಯವರಿಗೆ ಹೈನುಗಾರಿಕೆ ಕ್ಷೇತ್ರದಲ್ಲಿ “ಕ್ಷೀರಾರತ್ನ” ಪ್ರಶಸ್ತಿ

ಬೆಳ್ತಂಗಡಿ: ದ.ಕ. ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಆರಂಬೋಡಿಯ ಪ್ರತಾಪ್ ಶೆಟ್ಟಿ ಕುಂಡಾಜೆಯವರಿಗೆ “ಕ್ಷೀರಾರತ್ನ” ಪ್ರಶಸ್ತಿ ನೀಡಿ ಗೌರವಿಸಿದೆ.

ಪ್ರತಾಪ್ ಶೆಟ್ಟಿ ಕುಂಡಾಜೆಯವರು ಪ್ರಸ್ತುತ ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷರಾಗಿದ್ದು, ಆರಂಬೋಡಿ ಗ್ರಾಮದ ಕುಂಡಾಜೆ ಶ್ರೀಮತಿ ಸುನಂದಾ ಮತ್ತು ಸಂಜೀವ ಶೆಟ್ಟಿ ದಂಪತಿ ಪುತ್ರ.

ಇವರು ಆಟೋಮೋಬೈಲ್ ವೃತ್ತಿ ಶಿಕ್ಷಣ ಪಡೆದಿದ್ದು, ಬೆಂಗಳೂರು ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಅದನ್ನು ತ್ಯಜಿಸಿ ತನ್ನ ಊರಿಗೆ ಮರಳಿ ಕೃಷಿ ಮತ್ತು ಹೈನುಗಾರಿಕೆಯನ್ನು ಪ್ರಾರಂಭಿಸಿ ಪ್ರಸ್ತುತ ಪ್ರತಿ ದಿನಾ ಸರಾಸರಿ 100 ಲೀಟರ್‌ಗಿಂತಲು ಅಧಿಕ ಹಾಲನ್ನು ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಪೂರೈಸುತ್ತಿದ್ದಾರೆ.

ಸುಮಾರು 15 ಉತ್ತಮ ಜಾತಿಯ ತಳಿಗಳನ್ನು ಸಾಕುತ್ತಿರುವ ಇವರು ಹೈನುಗಾರಿಕೆಯೊಂದಿಗೆ ಅಡಿಕೆ ಕೃಷಿ, ತೆಂಗು ಕೃಷಿಯನ್ನು ಮಾಡುತ್ತಿದ್ದೂ ಉಳಿದ ಯುವಕರಿಗೆ ಪ್ರತಾಪ್ ಶೆಟ್ಟಿ ಪ್ರೇರಣೆಯಾಗಿದ್ದಾರೆ. ಇವರಿಗೆ ಬೆಂಬಲವಾಗಿ ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ಕಾರ್ಯದರ್ಶಿ, ನಿರ್ದೇಶಕರುಗಳು ಸಾಥ್ ನೀಡುತ್ತಿದ್ದಾರೆ

Related posts

ಉಜಿರೆ: ಸುರ್ಯ ರಸ್ತೆಯ ಪಡುವೆಟ್ಟು ಜನವಸತಿ ಪ್ರದೇಶಕ್ಕೆ ‘ಕೃಷ್ಣನಗರ’ ನಾಮಫಲಕ ಅನಾವರಣ

Suddi Udaya

ಕಕ್ಕಿಂಜೆ ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ

Suddi Udaya

ಬೆಳ್ತಂಗಡಿ: ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಳದಂಗಡಿ: ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರ ನಿವಾಸಕ್ಕೆ ಭೇಟಿ ನೀಡಿದ ಲಾವಣ್ಯ ಬಳ್ಳಾಲ್

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ: ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ಹೊಂದಿರುವ ಕುಟುಂಬಗಳು ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಅರಣ್ಯ ಸಚಿವರ ಭೇಟಿ

Suddi Udaya

ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಗೆ ಆಯ್ಕೆ

Suddi Udaya
error: Content is protected !!