25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಹಕಾರ ಸಪ್ತಾಹ ಕಾರ್ಯಕ್ರಮ: ಆರಂಬೋಡಿಯ ಪ್ರತಾಪ್ ಶೆಟ್ಟಿಯವರಿಗೆ ಹೈನುಗಾರಿಕೆ ಕ್ಷೇತ್ರದಲ್ಲಿ “ಕ್ಷೀರಾರತ್ನ” ಪ್ರಶಸ್ತಿ

ಬೆಳ್ತಂಗಡಿ: ದ.ಕ. ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಆರಂಬೋಡಿಯ ಪ್ರತಾಪ್ ಶೆಟ್ಟಿ ಕುಂಡಾಜೆಯವರಿಗೆ “ಕ್ಷೀರಾರತ್ನ” ಪ್ರಶಸ್ತಿ ನೀಡಿ ಗೌರವಿಸಿದೆ.

ಪ್ರತಾಪ್ ಶೆಟ್ಟಿ ಕುಂಡಾಜೆಯವರು ಪ್ರಸ್ತುತ ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷರಾಗಿದ್ದು, ಆರಂಬೋಡಿ ಗ್ರಾಮದ ಕುಂಡಾಜೆ ಶ್ರೀಮತಿ ಸುನಂದಾ ಮತ್ತು ಸಂಜೀವ ಶೆಟ್ಟಿ ದಂಪತಿ ಪುತ್ರ.

ಇವರು ಆಟೋಮೋಬೈಲ್ ವೃತ್ತಿ ಶಿಕ್ಷಣ ಪಡೆದಿದ್ದು, ಬೆಂಗಳೂರು ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಅದನ್ನು ತ್ಯಜಿಸಿ ತನ್ನ ಊರಿಗೆ ಮರಳಿ ಕೃಷಿ ಮತ್ತು ಹೈನುಗಾರಿಕೆಯನ್ನು ಪ್ರಾರಂಭಿಸಿ ಪ್ರಸ್ತುತ ಪ್ರತಿ ದಿನಾ ಸರಾಸರಿ 100 ಲೀಟರ್‌ಗಿಂತಲು ಅಧಿಕ ಹಾಲನ್ನು ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಪೂರೈಸುತ್ತಿದ್ದಾರೆ.

ಸುಮಾರು 15 ಉತ್ತಮ ಜಾತಿಯ ತಳಿಗಳನ್ನು ಸಾಕುತ್ತಿರುವ ಇವರು ಹೈನುಗಾರಿಕೆಯೊಂದಿಗೆ ಅಡಿಕೆ ಕೃಷಿ, ತೆಂಗು ಕೃಷಿಯನ್ನು ಮಾಡುತ್ತಿದ್ದೂ ಉಳಿದ ಯುವಕರಿಗೆ ಪ್ರತಾಪ್ ಶೆಟ್ಟಿ ಪ್ರೇರಣೆಯಾಗಿದ್ದಾರೆ. ಇವರಿಗೆ ಬೆಂಬಲವಾಗಿ ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ಕಾರ್ಯದರ್ಶಿ, ನಿರ್ದೇಶಕರುಗಳು ಸಾಥ್ ನೀಡುತ್ತಿದ್ದಾರೆ

Related posts

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ: ಗಣವೇಷಧಾರಿ ಸೇವಿಕೆಯರಿಂದ ಪಥ ಸಂಚಲನ

Suddi Udaya

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಮುಖ್ಯ ಕಾರ್ಯನಿರ್ವಣಧಿಕಾರಿ ಸತ್ಯ ಶಂಕರ್ ಕೆ.ಜಿರಿಗೆ ಬೀಳ್ಕೊಡುಗೆ ಹಾಗೂ ಗೌರಾರ್ಪಣೆ

Suddi Udaya

ಜ.1: ಸಾವ್ಯ-ಗುಜ್ಜೊಟ್ಟು 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜ್ಯೋತ್ಸವ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!