23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಜವಾಹರಲಾಲ್ ನೆಹರೂ ರವರ ಜನ್ಮ ದಿನದ ಅಂಗವಾಗಿ ಮಕ್ಕಳ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ವಿದ್ಯಾಸಂಸ್ಥೆಯ ಶಿಕ್ಷಕ ವೃಂದದವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ಮಕ್ಕಳೆಲ್ಲರಿಗೂ ಶುಭಾಶಯಗಳನ್ನು ಕೋರಿ,ವಿದ್ಯಾರ್ಥಿಗಳು ಪ್ರತಿನಿತ್ಯ ಕ್ರಿಯಾಶೀಲರಾಗಿದ್ದು ,ಸೃಜನಶೀಲತೆ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಮಹತ್ವವನ್ನು ತಿಳಿಸಿದರು.

ಸಂಸ್ಥೆಯ ಎಲ್ಲಾ ಶಿಕ್ಷಕ ಶಿಕ್ಷಕಿಯರು ಹಾಡಿನ ಮೂಲಕ ನೆರೆದಿದ್ದ ಎಲ್ಲಾ ಮಕ್ಕಳಿಗೆ ಪ್ರೀತಿಯ ಶುಭಾಶಯಗಳನ್ನು ತಿಳಿಸಿದರು.

ಸಂಸ್ಥೆಯ ಮುಖ್ಯಶಿಕ್ಷಕಿ ಶ್ರೀಮತಿ ವಿಜಯ ಮಕ್ಕಳನ್ನು ಉದ್ದೇಶಿಸಿ ಶಿಸ್ತು,ಪರಿಶ್ರಮ ಹಾಗೂ ಮಾನವೀಯ ಮೌಲ್ಯಗಳ ಮಹತ್ವವನ್ನು ವಿವರಿಸಿದರು.

ಶಾಲಾ ನಾಯಕಿ ದಿನಾಚರಣೆಯ ಕುರಿತಾಗಿ ಭಾಷಣದ ಮೂಲಕ ತನ್ನ ಅಭಿಪ್ರಾಯವನ್ನು ಹಂಚಿಕೊಂಡರು.

ಪ್ರಾಂಶುಪಾಲರು,ಸಂಯೋಜಕರಾದ ಯಶವಂತ್ ಜಿ ನಾಯಕ್ ಹಾಗೂ ಮುಖ್ಯಶಿಕ್ಷಕಿ ಯವರ ಜತೆಗೂಡಿ ಉಳಿದ ಎಲ್ಲ ಶಿಕ್ಷಕರು ನೆಹರೂರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ಸಲ್ಲಿಸಿದರು. ಮಕ್ಕಳೆಲ್ಲರೂ ತಮ್ಮ ಹರ್ಷವನ್ನು ವ್ಯಕ್ತಪಡಿಸಿದರು.ಎಲ್ಲರಿಗೂ ಸಿಹಿತಿಂಡಿ ವಿತರಿಸಲಾಯಿತು.
ಸಹಶಿಕ್ಷಕರಾದ ಪ್ರಶಾಂತ್ ಕೆ ಕಾರ್ಯಕ್ರಮ ನಿರೂಪಿಸಿ, ಸಹ ಶಿಕ್ಷಕಿ ಪ್ರಿಯತ ಸ್ವಾಗತಿಸಿ ,ದಿವ್ಯ ಕೆ ವಂದಿಸಿದರು.

ಮಕ್ಕಳ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ತರಗತಿವಾರು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಮಕ್ಕಳೆಲ್ಲರೂ ಉತ್ಸಾಹದಿಂದ ಪಾಲ್ಗೊಂಡರು.ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.ಅರ್ಥ ಪೂರ್ಣವಾಗಿ ಮಕ್ಕಳ ದಿನಾಚರಣೆ ಕಾರ್ಯಕ್ರಮವು ಸಂಪನ್ನಗೊಂಡಿತು.

Related posts

ಮುಂಡಾಜೆ ಫ್ರೆಂಡ್ಸ್ ಅಮೆಚೂರ್ ಅಸೋಸಿಯೇಶನ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

Suddi Udaya

ಕಡಿರುದ್ಯಾವರ ಶ್ರೀ ವನದುರ್ಗಾದೇವಿ ದೇವಸ್ಥಾನ ಟ್ರಸ್ಟ್ ವತಿಯಿಂದ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಇವರಿಗೆ ಅಭಿನಂದನೆ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವಸಿದ್ಧತಾ ಸಭೆ ಹಾಗೂ ಸಮಿತಿ ರಚನೆ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢ ಕಲಶಾಭಿಷೇಕ

Suddi Udaya

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

Suddi Udaya

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya
error: Content is protected !!