ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾರಿಂಜ ಸ. ಕಿ. ಪ್ರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಸಭೆ

ಉರುವಾಲು: ಕಾರಿಂಜ ಸ. ಕಿ. ಪ್ರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಸಭೆಯನ್ನು ಶಾಲಾ ಅಧ್ಯಕ್ಷ ಜಗನ್ನಾಥ ರೈ ಇವರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಆಟೋಟ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮಾಡಲಾಯಿತು. ಶಾಲೆಯ ದಾನಿಯಾದ ವಿನಯಕುಮಾರ್ ಇವರನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು. ಮಕ್ಕಳ ಹಕ್ಕುಗಳು, ಅದರ ರಕ್ಷಣೆ ಬಗ್ಗೆ ಮಾಹಿತಿ ನೀಡಲಾಯಿತು.


ನಿವೃತ್ತ ಯೋಧರಾದ ಜೆ.ಕೆ ಪೂಜಾರಿ ಇಳಂತಿಲ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ‌ ಸಂದರ್ಭದಲ್ಲಿ ಶಾಲಾ ಉಪಾಧ್ಯಕ್ಷ ನುಸೈಬ, ಮಾಜಿ ಅಧ್ಯಕ್ಷ ಓಬಯ್ಯ ಪೂಜಾರಿ ಕಾರಿಂಜ , ಅಂಗನವಾಡಿ ಕಾರ್ಯಕರ್ತೆ ಶಶಿಪ್ರಭಾ, ಮಕ್ಕಳ ಪೋಷಕರು, ಶಾಲಾಭಿವೃದ್ಧಿ ಸಮಿತಿಯ‌ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ಮುಖ್ಯಗುರುಗಳಾದ ಗಿರಿಜಾ ಎನ್ ಸ್ವಾಗತಿಸಿ, ಸಹಶಿಕ್ಷಕರಾದ ಪರಮೇಶ್ವರ ಎಸ್ ನಿರೂಪಿಸಿದರು.

Related posts

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಕೂಟ: ಬೆಳ್ತಂಗಡಿ ಶೊರಿನ್ ರಿಯೊ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಶಾಸಕ ಹರೀಶ್ ಪೂಂಜರ ಮನೆಯಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು: ನಿನ್ನೆಯ ಡೇಟ್ ಹಾಕಿ ಇಂದು ನೋಟಿಸ್ ನೀಡಿದ ಪೊಲೀಸ್ ಇಲಾಖೆ ಶಾಸಕರ ಪರ ವಕೀಲರ ವಾದ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್ ಉದ್ಘಾಟನೆ

Suddi Udaya

ಎಕ್ಸೆಲ್ ಪಿಯು ಕಾಲೇಜಿಗೆ ಪಿನಾಕಲ್ ನಲ್ಲಿ ಚಾಂಪಿಯನ್ ಶಿಪ್

Suddi Udaya
error: Content is protected !!