23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಕುಪೆಟ್ಟಿ, ಕಲ್ಲೇರಿ, ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗುಂಡಿಗಳಿಗೆ ತಾತ್ಕಲಿಕ ಪರಿಹಾರ: ಪ್ರಯಾಣಿಕರಿಗೆ ಧೂಳಿನ ಗೋಳು

ಬೆಳ್ತಂಗಡಿ: ಕುಪೆಟ್ಟಿ. ಕಲ್ಲೇರಿ, ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಅವ್ಯವಸ್ಥೆ ಕುರಿತು ಸುದ್ದಿ ಉದಯ ವಾರಪತ್ರಿಕೆಯಲ್ಲಿ ವರದಿ ಪ್ರಕಟಗೊಂಡ ಬೆನ್ನಲ್ಲೇ ಗುಂಡಿಗಳ ದರ್ಬಾರ್ ರಸ್ತೆಗೆ ತಾತ್ಕಲಿಕ ಪರಿಹಾರವಾಗಿ ಜಲ್ಲಿ ಹುಡಿ ಮಿಶ್ರಣದಿಂದ ದೊಡ್ಡ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಯುತ್ತಿದೆ.

ನ.13 ರಂದು “ವರ್ಷ ಕಳೆದರೂ ಅಭಿವೃದ್ಧಿ ಕಾಣದ ಕುಪ್ಪೆಟ್ಟಿ-ಕಲ್ಲೇರಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಹದಗೆಟ್ಟ ರಸ್ತೆಯಲ್ಲಿ ಸಂಚಾರಕ್ಕೆ ಸಂಚಕಾರ! ಈ ಬಾರಿ ರಸ್ತೆ ಅಭಿವೃದ್ಧಿಯ ಗ್ರಹಣ ಬಿಡುತ್ತಾ ? ಎಂಬ ಶೀರ್ಷಿಕೆಯಡಿ ಸುದ್ದಿ ಉದಯ ವರದಿ ಪ್ರಕಟಿಸಿತ್ತು.” ಪಿಡಬ್ಲೂಡಿ ಇಲಾಖೆ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಸುತ್ತಿದ್ದು ಮುಂದಿನ ದಿನಗಳಲ್ಲಿ ತೇಪೆ ಕಾರ್ಯವು ನಡೆಯಲಿದೆ ಎಂದು ತಿಳಿದು ಬಂದಿದೆ.

ಇದೀಗ ಮತ್ತೆ ಜಲ್ಲಿ ಹುಡಿಗಳಿಂದ ಹೊಂಡ ಮುಚ್ಚತ್ತಿರುವುದರಿಂದ ಧೂಳಿನಿಂದ ಆವೃತ್ತವಾಗಿರುವ ರಸ್ತೆ ಇಕ್ಕೆಲ್ಲೆಗಳು ಸವಾರಿಗೆ ಸಂಕಷ್ಟವಾಗಿ ಕಾಡುತ್ತಿದೆ. ಇನ್ನೂ ಈ ರಸ್ತೆಗೆ ತಾತ್ಕಲಿಕ ಪರಿಹಾರ ಕಂಡುಕೊಳ್ಳವ ಬದಲು ಹೊಸದಾಗಿಯೇ ರಸ್ತೆ ಮಾಡಬೇಕಿದೆ ಎಂಬುವುದು ಪ್ರಯಾಣಿಕರ ಅಭಿಪ್ರಾಯವಾಗಿದೆ. ಉಪ್ಪಿನಂಗಡಿ-ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಉಪ್ಪಿನಂಗಡಿವರೆಗೆ ನಡೆದಾಡಲು ಹಿಂಜರಿಯುವಷ್ಟು ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಕಲ್ಲೇರಿ ಸಮೀಪದ ಶಿವಗಿರಿ ಎಂಬಲ್ಲಿ ರಸ್ತೆ ಮಧ್ಯೆ ಬಾಳೆ ಹಾಗೂ ತೆಂಗಿನ ಗಿಡ, ಕೇಸು ಮತ್ತು ಪಪ್ಪಾಯ ಗಿಡವನ್ನು ನೆಟ್ಟು ನಾಗರಿಕರು ಪ್ರತಿಭಟಿಸಿದ್ದಾರೆ. ನೆಟ್ಟ ಗಿಡಗಳನ್ನು ನ.14 ರಂದು ತೆರವುಗೊಳಿಸಲಾಯಿತು.

Related posts

ನೈನಾಡು ಅಂಗನವಾಡಿ ಕೇಂದ್ರಕ್ಕೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದು ಹಾನಿ

Suddi Udaya

ಆರಂಬೋಡಿ: ಧನ್ಯಶ್ರೀ ಕೆ-ಮನೋಜ್ ಶೆಟ್ಟಿ ಐತೇರಿರವರ ಪುತ್ರ ಜಸ್ಟೀಕ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಸರಕಾರಿ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ನಾರಾವಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ದೈಹಿಕ ಶಿಕ್ಷಕ ಜೋನ್ ಕೆ ಪಿ ಸೇವಾ ನಿವೃತ್ತಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

Suddi Udaya

ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಪ್ರತಾಪ್ ಸಿಂಹ ನಾಯಕ್‌ ರಿಂದ ಸಚಿವ ಭೈರತಿ ಸುರೇಶ್ ರವರಿಗೆ ಮನವಿ

Suddi Udaya
error: Content is protected !!