Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

ಪುಂಜಾಲಕಟ್ಟೆ : ಕೆಪಿಎಸ್ ಪುಂಜಾಲಕಟ್ಟೆಯ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಉದ್ಘಾಟಿಸಿ ಮಕ್ಕಳ ದಿನಾಚರಣೆಯ ಶುಭಾಶಯ ಕೋರುತ್ತಾ ಮಕ್ಕಳ ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ಮಾತನಾಡುತ್ತ ತಂದೆ ತಾಯಿ ಮತ್ತು ಸಮಾಜದ ಕೊಡುಗೆಯನ್ನು ಸದಾ ಸ್ಮರಿಸುವುದು ಮಕ್ಕಳ ಜವಾಬ್ದಾರಿ ಎಂದು ನೆನಪಿಸಿದರು.

ಮುಖ್ಯ ಅತಿಥಿಯಾಗಿ ದ. ಕ. ಜಿಲ್ಲಾ ಪದವಿ ಪೂರ್ವ ಪ್ರಾಂಶುಪಾಲರ ಸಂಘದ ಅಧ್ಯಕ್ಷ ನವೀನ್ ಶೆಟ್ಟಿ ಕೆ, ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಜಯರಾಮ್ ಮತ್ತು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ಯಾಮ್ ಪ್ರಸಾದ್ ಸಂಪಿಗೆತ್ತಾಯ ಉಪಸ್ಥಿತರಿದ್ದರು. ದತ್ತಿ ಬಹುಮಾನ, ಆಟೋಟ ಸ್ಪರ್ಧೆ, ಕಲಿಕಾ, ಮತ್ತು ಸಾಂಸ್ಕೃತಿಕ ಸ್ಪರ್ಧೆ ಗಳಲ್ಲಿ ವಿಜೇತರಾದ ವಿದ್ಯಾರ್ಥಿ ಗಳನ್ನು ಪುರಸ್ಕಾರ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪೋಷಕ ರಕ್ಷಕ ಸಭೆ ನಡೆಸಲಾಯಿತು. ಸೃಷ್ಟಿ ಟಿoಕರಿಂಗ್ ಪ್ರಯೋಗಾಲಯ ಉದ್ಘಾಟಿಸಲಾಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಹೈಸ್ಕೂಲ್ ಪ್ರಭಾರ ಉಪಾಪ್ರಾಂಶುಪಾಲರಾದ ನಿರಂಜನ್ ಜೈನ್ ಮತ್ತು ಶಾಲಾಭಿವೃದ್ಧಿ ಸದಸ್ಯರಾದ ದಿವಾಕರ್ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಶಿಬಿರಕ್ಕೆ ಸುಲ್ಕೇರಿಯ ಶಶಿಕಾಂತ್ ಆಯ್ಕೆ

Suddi Udaya

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ-ರೂ 2ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬೊಳ್ಳಾಜೆ- ಡೆಂಜೋಲಿ-ಪಡಂಗಡಿ ರಸ್ತೆ ಕಾಮಗಾರಿಗೆ ಚಾಲನೆ

Suddi Udaya
error: Content is protected !!