25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರ್ಲ ಬೈಪಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಪೆರ್ಲ ಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025ನೇ ಸಾಲಿನ ಕುಪ್ಪೆಟ್ಟಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡುಗೈ ದಾನಿಗಳಾದ ಜಯಣ್ಣಗೌಡ ಮೀನಾಂದೇಲು ಉದ್ಘಾಟಿಸಿ ಶುಭ ಹಾರೈಸಿ, ಕಾರ್ಯಕ್ರಮಕ್ಕೆ ಹತ್ತು ಸಾವಿರ ರೂಪಾಯಿ ಸಹಾಯಧನನ್ನು ನೀಡಿದರು.
ಕಾರ್ಯಕ್ರಮದಲ್ಲಿ ದಾನಿಗಳಾದ ತಿಮ್ಮಪ್ಪ ಗೌಡ ಸೋಣಕುಮೇರು, ಗ್ರಾಮ ಪಂಚಾಯಿತಿ ಸದಸ್ಯರಾದ ಅನಿತ ಕೆ ಹಾಗೂ ಭಾರತಿ ಕೆ ಉಪಸ್ಥಿತರಿದ್ದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಸಹ ಶಿಕ್ಷಕ ವಿಜಯ ಕುಮಾರ ಇವರನ್ನು ಗೌರವಿಸಲಾಯಿತು.


ವಿವಿಧ ಕೊಠಡಿಗಳಲ್ಲಿ ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಗಳು ಜರುಗಿದ್ದು ಈ ಸ್ಪರ್ಧೆಗಳಲ್ಲಿ 16 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಿರಿಯ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮೈರೋಲ್ತಡ್ಕದ ವಿದ್ಯಾರ್ಥಿಗಳು ಪಡೆದುಕೊಂಡರೆ ದ್ವಿತೀಯ ಸಮಗ್ರವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪದ್ಮುಂಜದ ವಿದ್ಯಾರ್ಥಿಗಳು ಪಡೆದುಕೊಂಡರು. ಹಿರಿಯರ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಶ್ರೀ ಭಾರತಿ ಉರುವಾಲು, ದ್ವಿತೀಯ ಸಮಗ್ರವನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮೈರೋಲ್ತಡ್ಕ ಪಡೆದುಕೊಂಡಿದೆ.

Related posts

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ, ಕನ್ಯಾಡಿ ಯವರಿಂದ ರೂ. 25 ಸಾವಿರ ದೇಣಿಗೆ

Suddi Udaya

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 198.74 ಕೋಟಿ ವ್ಯವಹಾರ,66.79 ಲಕ್ಷ ನಿವ್ವಳ ಲಾಭ,ಸದಸ್ಯರಿಗೆ 12 ಶೇ ಡಿವಿಡೆಂಟ್ ಘೋಷಣೆ

Suddi Udaya
error: Content is protected !!