25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯ ವಕೀಲರ ಸಂಘದ ಚುನಾವಣೆ: ಬಿರುಸಿನ ಮತದಾನ

ಬೆಳ್ತಂಗಡಿ: ಬೆಳ್ತಂಗಡಿಯ ವಕೀಲರ ಸಂಘದ ಚುನಾವಣೆಯಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಘಟಾನುಘಟಿಗಳು ಸ್ಪರ್ಧೆಗೆ ಇಳಿದಿರುವುದರಿಂದ ಚುನಾವಣಾ ಕಣ ಜಿದ್ದಾಜಿದ್ದಿನಿಂದ ಕೂಡಿದೆ.

ಬೆಳಿಗ್ಗೆ ಗಂಟೆ 10.30 ರಿಂದ ಮತದಾನ ಪ್ರಕ್ರಿಯೆಗಳು ಪ್ರಾರಂಭಗೊಂಡಿದ್ದು, ಮತದಾನವು ಸಂಜೆ 4 ಗಂಟೆಯ ತನಕ ನಡೆಯಲಿದೆ. ಬಳಿಕ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

ಅಧ್ಯಕ್ಷ ಸ್ಥಾನಕ್ಕೆ ಹಿರಿಯ ವಕೀಲರಾದ ಅಲೋಶಿಯಸ್ ಎಸ್. ಲೋಬೊ ಮತ್ತು ಕೇಶವ ಪಿ. ಬೆಳಾಲು ನಡುವೆ ನೇರ ಹಣಾಹಣಿ ಉಂಟಾಗಿದ್ದು ತೀವ್ರ ಪೈಪೋಟಿ ಏರ್ಪಟ್ಟಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಏಕೈಕ ಅಭ್ಯರ್ಥಿಯಾಗಿದ್ದ ಶ್ರೀನಿವಾಸ ಗೌಡ ಬೆಳಾಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹರಿಪ್ರಕಾಶ್ ಪಿ.ಎನ್. ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವರು ಅವಿರೋಧ ಆಯ್ಕೆ ಆಗುತ್ತಾರೆ ಎಂದು ಅಂದಾಜಿಸಲಾಗಿತ್ತು. ಆದರೆ, ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಹರಿಪ್ರಕಾಶ್ ಪಿ.ಎನ್. ನಾಮಪತ್ರ ಹಿಂಪಡೆದಿದ್ದು ಆ ಸ್ಥಾನಕ್ಕೆ ಯಾರೂ ಅಭ್ಯರ್ಥಿಗಳೇ ಇಲ್ಲದಂತಾಗಿದೆ. ಹೊಸ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆದ ಬಳಿಕ ಪ್ರಧಾನ ಕಾರ್ಯದರ್ಶಿಯನ್ನು ಆಯ್ಕೆ ಮಾಡಲಾಗುತ್ತದೆ.

Related posts

ಉಪ್ಪಾರಪಳಿಕೆ ವಿಶ್ವ ಜ್ಯೋತಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya
error: Content is protected !!