July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯ ವಕೀಲರ ಸಂಘದ ಚುನಾವಣೆ: ಬಿರುಸಿನ ಮತದಾನ

ಬೆಳ್ತಂಗಡಿ: ಬೆಳ್ತಂಗಡಿಯ ವಕೀಲರ ಸಂಘದ ಚುನಾವಣೆಯಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಘಟಾನುಘಟಿಗಳು ಸ್ಪರ್ಧೆಗೆ ಇಳಿದಿರುವುದರಿಂದ ಚುನಾವಣಾ ಕಣ ಜಿದ್ದಾಜಿದ್ದಿನಿಂದ ಕೂಡಿದೆ.

ಬೆಳಿಗ್ಗೆ ಗಂಟೆ 10.30 ರಿಂದ ಮತದಾನ ಪ್ರಕ್ರಿಯೆಗಳು ಪ್ರಾರಂಭಗೊಂಡಿದ್ದು, ಮತದಾನವು ಸಂಜೆ 4 ಗಂಟೆಯ ತನಕ ನಡೆಯಲಿದೆ. ಬಳಿಕ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

ಅಧ್ಯಕ್ಷ ಸ್ಥಾನಕ್ಕೆ ಹಿರಿಯ ವಕೀಲರಾದ ಅಲೋಶಿಯಸ್ ಎಸ್. ಲೋಬೊ ಮತ್ತು ಕೇಶವ ಪಿ. ಬೆಳಾಲು ನಡುವೆ ನೇರ ಹಣಾಹಣಿ ಉಂಟಾಗಿದ್ದು ತೀವ್ರ ಪೈಪೋಟಿ ಏರ್ಪಟ್ಟಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಏಕೈಕ ಅಭ್ಯರ್ಥಿಯಾಗಿದ್ದ ಶ್ರೀನಿವಾಸ ಗೌಡ ಬೆಳಾಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹರಿಪ್ರಕಾಶ್ ಪಿ.ಎನ್. ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವರು ಅವಿರೋಧ ಆಯ್ಕೆ ಆಗುತ್ತಾರೆ ಎಂದು ಅಂದಾಜಿಸಲಾಗಿತ್ತು. ಆದರೆ, ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಹರಿಪ್ರಕಾಶ್ ಪಿ.ಎನ್. ನಾಮಪತ್ರ ಹಿಂಪಡೆದಿದ್ದು ಆ ಸ್ಥಾನಕ್ಕೆ ಯಾರೂ ಅಭ್ಯರ್ಥಿಗಳೇ ಇಲ್ಲದಂತಾಗಿದೆ. ಹೊಸ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆದ ಬಳಿಕ ಪ್ರಧಾನ ಕಾರ್ಯದರ್ಶಿಯನ್ನು ಆಯ್ಕೆ ಮಾಡಲಾಗುತ್ತದೆ.

Related posts

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರಕ್ಕೆ ಭಟ್ಟಾರಕರ ಸ್ವಾಮೀಜಿ ಭೇಟಿ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

ಉಜಿರೆ: ಕುಂಜರ್ಪದಲ್ಲಿ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಲಾಯಿಲ: ಕಂಪ್ಯೂಟರ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya
error: Content is protected !!