23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

ಬೆಳ್ತಂಗಡಿ: ಶ್ರೀ ಕ್ಷೇತ್ರ ಸೌತಡ್ಕದ ದೇವಸ್ಥಾನದಲ್ಲಿ ದಿನಗೂಲಿ ನೌಕರರಾಗಿ ದುಡಿಯುತ್ತಿರುವ ಶ್ರೀಮತಿ ಸುಜಾತಾ ಇವರ ಪತಿ ಬಾಲಕೃಷ್ಣ ಶೆಟ್ಟಿ ಇವರು ಇತ್ತೀಚೆಗೆ ಆನೆ ದಾಳಿ ಸಂದರ್ಭ ಮೃತ ಪಟ್ಟಿದ್ದು ಆ ಸಮಯ ರಾಜ್ಯ ಕೆ.ಪಿ.ಸಿ.ಸಿ.ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾo ಇವರು ಮನೆ ಬೇಟಿ ನೀಡಿದ ಸಂದರ್ಭ, ಮನೆಯವರು ಮತ್ತು ಗ್ರಾಮಸ್ಥರು ಮೃತ ಬಾಲಕೃಷ್ಣ ಶೆಟ್ರ ಪುತ್ರಿ ಕುಮಾರಿ ವೇದಿತಳಿಗೆ , ಉದ್ಯೋಗ ಮತ್ತು ಆನೇ ದಾಳಿಯಿಂದ ಮೃತ ಪಟ್ಟ ಬಗ್ಗೆ ಅರಣ್ಯ ಇಲಾಖೆ ಯಿಂದ ಸೂಕ್ತ ಪರಿಹಾರ ದೊರಕಿಸಿಕೊಡುವಂತೆ ವಿನಂತಿಸಿದ್ದರು.

ಮನವಿಗೆ ಸ್ಪಂದಿಸಿದ ರಕ್ಷಿತ್ ಶಿವಾರಂ ರವರು ಬೆಂಗಳೂರಿನ ಪ್ರಸಿದ್ಧ ಐಟಿ ಕಂಪನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟಿದ್ದಾರೆ. ನ.17ರಂದು ಕುಮಾರಿ ವೇದಿತ ಅವರು ಐಟಿ ಉದ್ಯೋಗಿಯಾಗಿ ಕೆಲಸ ಸೇರುವಂತೆ ಸಂಸ್ಥೆಯು ಆದೇಶ ನೀಡಿರುತ್ತದೆ. ಅಲ್ಲದೆ ಅರಣ್ಯ ಇಲಾಖೆಯಿಂದ ಪರಿಹಾರವಾಗಿ ರೂ 20ಲಕ್ಷ ಮಂಜೂರಾತಿ ಗೊಳಿಸುವಲ್ಲಿಯೂ ಸಕ್ರಿಯ ಪಾತ್ರ ವಹಿಸಿ, ಪರಿಹಾರ ಒದಗಿಸಿದ ಮತ್ತು ಉದ್ಯೋಗವನ್ನು ದೊರಕಿಸಿಕೊಟ್ಟ ರಕ್ಷಿತ್ ಶಿವರಾಂ ಇವರಿಗೆ ಕ್ಷೇತ್ರದ ವ್ಯವಸ್ಥಾಪನ ಸಮಿತಿಯು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದೆ ಎಂದು ವ್ಯವಸ್ಥಾಪನ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

Suddi Udaya

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

Suddi Udaya

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

Suddi Udaya

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

Suddi Udaya

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya
error: Content is protected !!