23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

ಬೆಳ್ತಂಗಡಿ: ಶ್ರೀ ಕ್ಷೇತ್ರ ಸೌತಡ್ಕದ ದೇವಸ್ಥಾನದಲ್ಲಿ ದಿನಗೂಲಿ ನೌಕರರಾಗಿ ದುಡಿಯುತ್ತಿರುವ ಶ್ರೀಮತಿ ಸುಜಾತಾ ಇವರ ಪತಿ ಬಾಲಕೃಷ್ಣ ಶೆಟ್ಟಿ ಇವರು ಇತ್ತೀಚೆಗೆ ಆನೆ ದಾಳಿ ಸಂದರ್ಭ ಮೃತ ಪಟ್ಟಿದ್ದು ಆ ಸಮಯ ರಾಜ್ಯ ಕೆ.ಪಿ.ಸಿ.ಸಿ.ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾo ಇವರು ಮನೆ ಬೇಟಿ ನೀಡಿದ ಸಂದರ್ಭ, ಮನೆಯವರು ಮತ್ತು ಗ್ರಾಮಸ್ಥರು ಮೃತ ಬಾಲಕೃಷ್ಣ ಶೆಟ್ರ ಪುತ್ರಿ ಕುಮಾರಿ ವೇದಿತಳಿಗೆ , ಉದ್ಯೋಗ ಮತ್ತು ಆನೇ ದಾಳಿಯಿಂದ ಮೃತ ಪಟ್ಟ ಬಗ್ಗೆ ಅರಣ್ಯ ಇಲಾಖೆ ಯಿಂದ ಸೂಕ್ತ ಪರಿಹಾರ ದೊರಕಿಸಿಕೊಡುವಂತೆ ವಿನಂತಿಸಿದ್ದರು.

ಮನವಿಗೆ ಸ್ಪಂದಿಸಿದ ರಕ್ಷಿತ್ ಶಿವಾರಂ ರವರು ಬೆಂಗಳೂರಿನ ಪ್ರಸಿದ್ಧ ಐಟಿ ಕಂಪನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟಿದ್ದಾರೆ. ನ.17ರಂದು ಕುಮಾರಿ ವೇದಿತ ಅವರು ಐಟಿ ಉದ್ಯೋಗಿಯಾಗಿ ಕೆಲಸ ಸೇರುವಂತೆ ಸಂಸ್ಥೆಯು ಆದೇಶ ನೀಡಿರುತ್ತದೆ. ಅಲ್ಲದೆ ಅರಣ್ಯ ಇಲಾಖೆಯಿಂದ ಪರಿಹಾರವಾಗಿ ರೂ 20ಲಕ್ಷ ಮಂಜೂರಾತಿ ಗೊಳಿಸುವಲ್ಲಿಯೂ ಸಕ್ರಿಯ ಪಾತ್ರ ವಹಿಸಿ, ಪರಿಹಾರ ಒದಗಿಸಿದ ಮತ್ತು ಉದ್ಯೋಗವನ್ನು ದೊರಕಿಸಿಕೊಟ್ಟ ರಕ್ಷಿತ್ ಶಿವರಾಂ ಇವರಿಗೆ ಕ್ಷೇತ್ರದ ವ್ಯವಸ್ಥಾಪನ ಸಮಿತಿಯು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದೆ ಎಂದು ವ್ಯವಸ್ಥಾಪನ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಜ.14-23: ಸಾವಿರ ವರ್ಷಗಳ ಇತಿಹಾಸವಿರುವ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ-ಮಹಾರಥೋತ್ಸವ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮುಂಡಾಜೆ ವಿರಾಟ್ ಹಿಂದೂ ಸೇವಾ ಸಂಘ ವತಿಯಿಂದ ಸೋಮಂತಡ್ಕದಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆ

Suddi Udaya

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

Suddi Udaya

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya

ಸೌಜನ್ಯ ತಾಯಿ ಕುಸುಮಾವತಿ ವಿರುದ್ಧ ಎಸ್‌ಐಟಿಗೆ ದೂರು

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya
error: Content is protected !!