September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

ಬೆಳ್ತಂಗಡಿ: ಶ್ರೀ ಕ್ಷೇತ್ರ ಸೌತಡ್ಕದ ದೇವಸ್ಥಾನದಲ್ಲಿ ದಿನಗೂಲಿ ನೌಕರರಾಗಿ ದುಡಿಯುತ್ತಿರುವ ಶ್ರೀಮತಿ ಸುಜಾತಾ ಇವರ ಪತಿ ಬಾಲಕೃಷ್ಣ ಶೆಟ್ಟಿ ಇವರು ಇತ್ತೀಚೆಗೆ ಆನೆ ದಾಳಿ ಸಂದರ್ಭ ಮೃತ ಪಟ್ಟಿದ್ದು ಆ ಸಮಯ ರಾಜ್ಯ ಕೆ.ಪಿ.ಸಿ.ಸಿ.ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾo ಇವರು ಮನೆ ಬೇಟಿ ನೀಡಿದ ಸಂದರ್ಭ, ಮನೆಯವರು ಮತ್ತು ಗ್ರಾಮಸ್ಥರು ಮೃತ ಬಾಲಕೃಷ್ಣ ಶೆಟ್ರ ಪುತ್ರಿ ಕುಮಾರಿ ವೇದಿತಳಿಗೆ , ಉದ್ಯೋಗ ಮತ್ತು ಆನೇ ದಾಳಿಯಿಂದ ಮೃತ ಪಟ್ಟ ಬಗ್ಗೆ ಅರಣ್ಯ ಇಲಾಖೆ ಯಿಂದ ಸೂಕ್ತ ಪರಿಹಾರ ದೊರಕಿಸಿಕೊಡುವಂತೆ ವಿನಂತಿಸಿದ್ದರು.

ಮನವಿಗೆ ಸ್ಪಂದಿಸಿದ ರಕ್ಷಿತ್ ಶಿವಾರಂ ರವರು ಬೆಂಗಳೂರಿನ ಪ್ರಸಿದ್ಧ ಐಟಿ ಕಂಪನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟಿದ್ದಾರೆ. ನ.17ರಂದು ಕುಮಾರಿ ವೇದಿತ ಅವರು ಐಟಿ ಉದ್ಯೋಗಿಯಾಗಿ ಕೆಲಸ ಸೇರುವಂತೆ ಸಂಸ್ಥೆಯು ಆದೇಶ ನೀಡಿರುತ್ತದೆ. ಅಲ್ಲದೆ ಅರಣ್ಯ ಇಲಾಖೆಯಿಂದ ಪರಿಹಾರವಾಗಿ ರೂ 20ಲಕ್ಷ ಮಂಜೂರಾತಿ ಗೊಳಿಸುವಲ್ಲಿಯೂ ಸಕ್ರಿಯ ಪಾತ್ರ ವಹಿಸಿ, ಪರಿಹಾರ ಒದಗಿಸಿದ ಮತ್ತು ಉದ್ಯೋಗವನ್ನು ದೊರಕಿಸಿಕೊಟ್ಟ ರಕ್ಷಿತ್ ಶಿವರಾಂ ಇವರಿಗೆ ಕ್ಷೇತ್ರದ ವ್ಯವಸ್ಥಾಪನ ಸಮಿತಿಯು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದೆ ಎಂದು ವ್ಯವಸ್ಥಾಪನ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ನಿಡ್ಲೆ: ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಹಾಗೂ ವನಭೋಜನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಪೆರಿಂಜೆ: ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ: ನಾರೀ ಶಕ್ತಿಯಿಂದ ಸಮಾಜದ ಉದ್ಧಾರ: ಡಾ. ಮಧುಮಾಲ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ರೂ. 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸೂಳಬೆಟ್ಟು ಸ.ಕಿ. ಪ್ರಾಥಮಿಕ ಶಾಲಾ ವಿಭಾಗದ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!