23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

ಬೆಳ್ತಂಗಡಿ: ಶ್ರೀ ಕ್ಷೇತ್ರ ಸೌತಡ್ಕದ ದೇವಸ್ಥಾನದಲ್ಲಿ ದಿನಗೂಲಿ ನೌಕರರಾಗಿ ದುಡಿಯುತ್ತಿರುವ ಶ್ರೀಮತಿ ಸುಜಾತಾ ಇವರ ಪತಿ ಬಾಲಕೃಷ್ಣ ಶೆಟ್ಟಿ ಇವರು ಇತ್ತೀಚೆಗೆ ಆನೆ ದಾಳಿ ಸಂದರ್ಭ ಮೃತ ಪಟ್ಟಿದ್ದು ಆ ಸಮಯ ರಾಜ್ಯ ಕೆ.ಪಿ.ಸಿ.ಸಿ.ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾo ಇವರು ಮನೆ ಬೇಟಿ ನೀಡಿದ ಸಂದರ್ಭ, ಮನೆಯವರು ಮತ್ತು ಗ್ರಾಮಸ್ಥರು ಮೃತ ಬಾಲಕೃಷ್ಣ ಶೆಟ್ರ ಪುತ್ರಿ ಕುಮಾರಿ ವೇದಿತಳಿಗೆ , ಉದ್ಯೋಗ ಮತ್ತು ಆನೇ ದಾಳಿಯಿಂದ ಮೃತ ಪಟ್ಟ ಬಗ್ಗೆ ಅರಣ್ಯ ಇಲಾಖೆ ಯಿಂದ ಸೂಕ್ತ ಪರಿಹಾರ ದೊರಕಿಸಿಕೊಡುವಂತೆ ವಿನಂತಿಸಿದ್ದರು.

ಮನವಿಗೆ ಸ್ಪಂದಿಸಿದ ರಕ್ಷಿತ್ ಶಿವಾರಂ ರವರು ಬೆಂಗಳೂರಿನ ಪ್ರಸಿದ್ಧ ಐಟಿ ಕಂಪನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟಿದ್ದಾರೆ. ನ.17ರಂದು ಕುಮಾರಿ ವೇದಿತ ಅವರು ಐಟಿ ಉದ್ಯೋಗಿಯಾಗಿ ಕೆಲಸ ಸೇರುವಂತೆ ಸಂಸ್ಥೆಯು ಆದೇಶ ನೀಡಿರುತ್ತದೆ. ಅಲ್ಲದೆ ಅರಣ್ಯ ಇಲಾಖೆಯಿಂದ ಪರಿಹಾರವಾಗಿ ರೂ 20ಲಕ್ಷ ಮಂಜೂರಾತಿ ಗೊಳಿಸುವಲ್ಲಿಯೂ ಸಕ್ರಿಯ ಪಾತ್ರ ವಹಿಸಿ, ಪರಿಹಾರ ಒದಗಿಸಿದ ಮತ್ತು ಉದ್ಯೋಗವನ್ನು ದೊರಕಿಸಿಕೊಟ್ಟ ರಕ್ಷಿತ್ ಶಿವರಾಂ ಇವರಿಗೆ ಕ್ಷೇತ್ರದ ವ್ಯವಸ್ಥಾಪನ ಸಮಿತಿಯು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದೆ ಎಂದು ವ್ಯವಸ್ಥಾಪನ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಮಾಜಿ ಶಾಸಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿಯ ಪಿಎಸ್ಐ ಓಡಿಯಪ್ಪ ಗೌಡ ಹಾಗೂ ಪುಂಜಾಲಕಟ್ಟೆಯ ಪಿಎಸ್ಐ ನಂದ ಕುಮಾರ್ ವರ್ಗಾವಣೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಪದಗ್ರಹಣ

Suddi Udaya

ಹುಣ್ಸೆಕಟ್ಟೆಯ ಪಂಜಿರ್ಪು ಬಳಿ ಚಿರತೆ ಓಡಾಟ: ಭಯಭೀತರಾದ ಜನರು

Suddi Udaya

ನಾಳೆ (ನ.8): ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ರಖ್ಯಾತ ಪ್ಲೈವುಡ್ ಮಳಿಗೆ “ಆನ್‌ಪ್ಲೈ” ಶುಭಾರಂಭ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!