September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎರುಕಡಪ್ಪು ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಮಡಂತ್ಯಾರು : ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ನ.14 ರಂದು ನಡೆಯಿತು. ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಅಂಗನವಾಡಿ ಕೇಂದ್ರದ ಪುಟಾಣಿಗಳಿಂದ ಛದ್ಮವೇಷ, ಆಟೋಟ ಸ್ಪರ್ಧೆ ಮತ್ತು ಮಕ್ಕಳ ಪೋಷಕರಿಗೆ ವಿವಿಧ ರೀತಿಯ ಅಟೋಟ ಸ್ಪರ್ಧೆ ನಡೆಯಿತು. ಹಾಗೂ ವಿಜೇತರಿಗೆ ಬಹುಮಾನ ವಿತರಣೆ ಮಾಡಿದರು.
ಬಾಲವಿಕಾಸ ಸಮಿತಿ ಅಧ್ಯಕ್ಷ ನೀತಾ ಕುಮಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಕೊಡುಗೆ: ಮಕ್ಕಳ ಪೋಷಕರಾದ ನಜೀರ್ ಹುಸೈನ್ ಸೌಂಡ್ ಬಾಕ್ಸ್ ಮತ್ತು ಮೈಕ್ ನೀಡಿದರು. ಮಹಮ್ಮದ್ (ಮೋನು) ಗೋಡೆ ಗಡಿಯಾರ, ಹಸನಬ್ಬ ಪೇರಾಜೆ ಕುಕ್ಕರ್ ನೀಡಿ ಸಹಕರಿಸಿದರು.
ಅಂಚೆ ಇಲಾಖೆ ನಿವೃತ್ತ ಡಾಕಯ್ಯ ಗೌಡ ಹೀರ್ಯ ಅವರನ್ನು ಸನ್ಮಾನಿಸಿ, ಗೌರವಿಸಿದರು. ಆಶಾ ಕಾರ್ಯಕರ್ತೆ ಸುಭಾಷಿಣಿ ಕೆ., ಸಹಾಯಕಿ ಗೀತಾ ಹಾಗೂ ಮಕ್ಕಳ ಪೋಷಕರು ಮತ್ತಿತರರು ಉಪಸ್ಥಿತರಿದ್ದರು. ಆಂಗ್ಲ ಕೇಂದ್ರ ಕಾರ್ಯಕರ್ತೆ ಗುಣವತಿ ಕೆ.ಎನ್. ಸ್ವಾಗತಿಸಿ, ನಿರೂಪಿಸಿದರು.

Related posts

ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

Suddi Udaya

ಕಲ್ಮಂಜ ಪ್ರೌಢಶಾಲೆಯ ವಿದ್ಯಾರ್ಥಿಗಳು ಯೋಗಾಸನದಲ್ಲಿ ವಿಭಾಗಮಟ್ಟಕ್ಕೆ ಆಯ್ಕೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ನಡ: ಕನ್ಯಾಡಿ-1 ಸಾರ್ವ ಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

Suddi Udaya
error: Content is protected !!