23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎರುಕಡಪ್ಪು ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಮಡಂತ್ಯಾರು : ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ನ.14 ರಂದು ನಡೆಯಿತು. ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಅಂಗನವಾಡಿ ಕೇಂದ್ರದ ಪುಟಾಣಿಗಳಿಂದ ಛದ್ಮವೇಷ, ಆಟೋಟ ಸ್ಪರ್ಧೆ ಮತ್ತು ಮಕ್ಕಳ ಪೋಷಕರಿಗೆ ವಿವಿಧ ರೀತಿಯ ಅಟೋಟ ಸ್ಪರ್ಧೆ ನಡೆಯಿತು. ಹಾಗೂ ವಿಜೇತರಿಗೆ ಬಹುಮಾನ ವಿತರಣೆ ಮಾಡಿದರು.
ಬಾಲವಿಕಾಸ ಸಮಿತಿ ಅಧ್ಯಕ್ಷ ನೀತಾ ಕುಮಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಕೊಡುಗೆ: ಮಕ್ಕಳ ಪೋಷಕರಾದ ನಜೀರ್ ಹುಸೈನ್ ಸೌಂಡ್ ಬಾಕ್ಸ್ ಮತ್ತು ಮೈಕ್ ನೀಡಿದರು. ಮಹಮ್ಮದ್ (ಮೋನು) ಗೋಡೆ ಗಡಿಯಾರ, ಹಸನಬ್ಬ ಪೇರಾಜೆ ಕುಕ್ಕರ್ ನೀಡಿ ಸಹಕರಿಸಿದರು.
ಅಂಚೆ ಇಲಾಖೆ ನಿವೃತ್ತ ಡಾಕಯ್ಯ ಗೌಡ ಹೀರ್ಯ ಅವರನ್ನು ಸನ್ಮಾನಿಸಿ, ಗೌರವಿಸಿದರು. ಆಶಾ ಕಾರ್ಯಕರ್ತೆ ಸುಭಾಷಿಣಿ ಕೆ., ಸಹಾಯಕಿ ಗೀತಾ ಹಾಗೂ ಮಕ್ಕಳ ಪೋಷಕರು ಮತ್ತಿತರರು ಉಪಸ್ಥಿತರಿದ್ದರು. ಆಂಗ್ಲ ಕೇಂದ್ರ ಕಾರ್ಯಕರ್ತೆ ಗುಣವತಿ ಕೆ.ಎನ್. ಸ್ವಾಗತಿಸಿ, ನಿರೂಪಿಸಿದರು.

Related posts

ಉಜಿರೆ ಪಂಚಾಯತ್ ನ ತ್ಯಾಜ್ಯ ನಿರ್ವಹಣಾ ಘಟಕ ಹಾಗೂ ಗ್ರಂಥಾಲಯಕ್ಕೆ ಎನ್ನೆಸ್ಸೆಸ್ ಸ್ವಯಂ ಸೇವಕರ ಭೇಟಿ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ: “ಆರಿದ್ರಾ ಮಳೆ ಆರ್ಭಟ”- ಮೈದುಂಬಿ ಹರಿದ ನದಿಗಳು-ಶಿಶಿಲೇಶ್ವರ ದೇವಾಲಯಕ್ಕೆ ಜಲದಿಗ್ಬಂದನ

Suddi Udaya

ಧರ್ಮಸ್ಥಳ ಬೊಳ್ಮನಾರು ಜನನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಬಸ್ ದರ ಏರಿಕೆ ಮಾಡಿರುವುದು ರಾಜ್ಯ ಸರಕಾರ ಜನರ ಬದುಕಿನ‌ ಮೇಲೆ ದಾಳಿ ಮಾಡಿದಂತಾಗಿದೆ : ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್

Suddi Udaya

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya
error: Content is protected !!