ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾರಿಂಜ ಸ. ಕಿ. ಪ್ರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಸಭೆ

ಉರುವಾಲು: ಕಾರಿಂಜ ಸ. ಕಿ. ಪ್ರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಸಭೆಯನ್ನು ಶಾಲಾ ಅಧ್ಯಕ್ಷ ಜಗನ್ನಾಥ ರೈ ಇವರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಆಟೋಟ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮಾಡಲಾಯಿತು. ಶಾಲೆಯ ದಾನಿಯಾದ ವಿನಯಕುಮಾರ್ ಇವರನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು. ಮಕ್ಕಳ ಹಕ್ಕುಗಳು, ಅದರ ರಕ್ಷಣೆ ಬಗ್ಗೆ ಮಾಹಿತಿ ನೀಡಲಾಯಿತು.


ನಿವೃತ್ತ ಯೋಧರಾದ ಜೆ.ಕೆ ಪೂಜಾರಿ ಇಳಂತಿಲ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ‌ ಸಂದರ್ಭದಲ್ಲಿ ಶಾಲಾ ಉಪಾಧ್ಯಕ್ಷ ನುಸೈಬ, ಮಾಜಿ ಅಧ್ಯಕ್ಷ ಓಬಯ್ಯ ಪೂಜಾರಿ ಕಾರಿಂಜ , ಅಂಗನವಾಡಿ ಕಾರ್ಯಕರ್ತೆ ಶಶಿಪ್ರಭಾ, ಮಕ್ಕಳ ಪೋಷಕರು, ಶಾಲಾಭಿವೃದ್ಧಿ ಸಮಿತಿಯ‌ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ಮುಖ್ಯಗುರುಗಳಾದ ಗಿರಿಜಾ ಎನ್ ಸ್ವಾಗತಿಸಿ, ಸಹಶಿಕ್ಷಕರಾದ ಪರಮೇಶ್ವರ ಎಸ್ ನಿರೂಪಿಸಿದರು.

Related posts

ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್‌ನಲ್ಲಿ ಪ್ರಥಮ ಪೋಷಕರ-ಶಿಕ್ಷಕರ ಸಭೆ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ “ಕರಂಡಕಾಸುರ ವಧೆ”

Suddi Udaya

ಮೇ 15: ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜು: ಸಾಧಕರ ದಿನ-229 ವಿದ್ಯಾರ್ಥಿ ಸಾಧಕರಿಗೆ ಪ್ರಶಸ್ತಿ ಪತ್ರ ವಿತರಣೆ

Suddi Udaya
error: Content is protected !!