26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಕುಪೆಟ್ಟಿ, ಕಲ್ಲೇರಿ, ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗುಂಡಿಗಳಿಗೆ ತಾತ್ಕಲಿಕ ಪರಿಹಾರ: ಪ್ರಯಾಣಿಕರಿಗೆ ಧೂಳಿನ ಗೋಳು

ಬೆಳ್ತಂಗಡಿ: ಕುಪೆಟ್ಟಿ. ಕಲ್ಲೇರಿ, ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಅವ್ಯವಸ್ಥೆ ಕುರಿತು ಸುದ್ದಿ ಉದಯ ವಾರಪತ್ರಿಕೆಯಲ್ಲಿ ವರದಿ ಪ್ರಕಟಗೊಂಡ ಬೆನ್ನಲ್ಲೇ ಗುಂಡಿಗಳ ದರ್ಬಾರ್ ರಸ್ತೆಗೆ ತಾತ್ಕಲಿಕ ಪರಿಹಾರವಾಗಿ ಜಲ್ಲಿ ಹುಡಿ ಮಿಶ್ರಣದಿಂದ ದೊಡ್ಡ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಯುತ್ತಿದೆ.

ನ.13 ರಂದು “ವರ್ಷ ಕಳೆದರೂ ಅಭಿವೃದ್ಧಿ ಕಾಣದ ಕುಪ್ಪೆಟ್ಟಿ-ಕಲ್ಲೇರಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಹದಗೆಟ್ಟ ರಸ್ತೆಯಲ್ಲಿ ಸಂಚಾರಕ್ಕೆ ಸಂಚಕಾರ! ಈ ಬಾರಿ ರಸ್ತೆ ಅಭಿವೃದ್ಧಿಯ ಗ್ರಹಣ ಬಿಡುತ್ತಾ ? ಎಂಬ ಶೀರ್ಷಿಕೆಯಡಿ ಸುದ್ದಿ ಉದಯ ವರದಿ ಪ್ರಕಟಿಸಿತ್ತು.” ಪಿಡಬ್ಲೂಡಿ ಇಲಾಖೆ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಸುತ್ತಿದ್ದು ಮುಂದಿನ ದಿನಗಳಲ್ಲಿ ತೇಪೆ ಕಾರ್ಯವು ನಡೆಯಲಿದೆ ಎಂದು ತಿಳಿದು ಬಂದಿದೆ.

ಇದೀಗ ಮತ್ತೆ ಜಲ್ಲಿ ಹುಡಿಗಳಿಂದ ಹೊಂಡ ಮುಚ್ಚತ್ತಿರುವುದರಿಂದ ಧೂಳಿನಿಂದ ಆವೃತ್ತವಾಗಿರುವ ರಸ್ತೆ ಇಕ್ಕೆಲ್ಲೆಗಳು ಸವಾರಿಗೆ ಸಂಕಷ್ಟವಾಗಿ ಕಾಡುತ್ತಿದೆ. ಇನ್ನೂ ಈ ರಸ್ತೆಗೆ ತಾತ್ಕಲಿಕ ಪರಿಹಾರ ಕಂಡುಕೊಳ್ಳವ ಬದಲು ಹೊಸದಾಗಿಯೇ ರಸ್ತೆ ಮಾಡಬೇಕಿದೆ ಎಂಬುವುದು ಪ್ರಯಾಣಿಕರ ಅಭಿಪ್ರಾಯವಾಗಿದೆ. ಉಪ್ಪಿನಂಗಡಿ-ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಉಪ್ಪಿನಂಗಡಿವರೆಗೆ ನಡೆದಾಡಲು ಹಿಂಜರಿಯುವಷ್ಟು ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಕಲ್ಲೇರಿ ಸಮೀಪದ ಶಿವಗಿರಿ ಎಂಬಲ್ಲಿ ರಸ್ತೆ ಮಧ್ಯೆ ಬಾಳೆ ಹಾಗೂ ತೆಂಗಿನ ಗಿಡ, ಕೇಸು ಮತ್ತು ಪಪ್ಪಾಯ ಗಿಡವನ್ನು ನೆಟ್ಟು ನಾಗರಿಕರು ಪ್ರತಿಭಟಿಸಿದ್ದಾರೆ. ನೆಟ್ಟ ಗಿಡಗಳನ್ನು ನ.14 ರಂದು ತೆರವುಗೊಳಿಸಲಾಯಿತು.

Related posts

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ಕಟೀಲ್ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಭಕ್ತರಿಂದ ಪಾದಯಾತ್ರೆ

Suddi Udaya

ಉಜಿರೆ: ಕಾರು ಡಿಕ್ಕಿ; ಸೈಕಲ್ ಸವಾರನಿಗೆ ಗಂಭೀರವಾಗಿ ಗಾಯ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

Suddi Udaya

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ರಾಮ ನವಮಿ ಆಚರಣೆ

Suddi Udaya

ಮಡಂತ್ಯಾರು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!