ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಕುಪೆಟ್ಟಿ, ಕಲ್ಲೇರಿ, ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗುಂಡಿಗಳಿಗೆ ತಾತ್ಕಲಿಕ ಪರಿಹಾರ: ಪ್ರಯಾಣಿಕರಿಗೆ ಧೂಳಿನ ಗೋಳು

ಬೆಳ್ತಂಗಡಿ: ಕುಪೆಟ್ಟಿ. ಕಲ್ಲೇರಿ, ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಅವ್ಯವಸ್ಥೆ ಕುರಿತು ಸುದ್ದಿ ಉದಯ ವಾರಪತ್ರಿಕೆಯಲ್ಲಿ ವರದಿ ಪ್ರಕಟಗೊಂಡ ಬೆನ್ನಲ್ಲೇ ಗುಂಡಿಗಳ ದರ್ಬಾರ್ ರಸ್ತೆಗೆ ತಾತ್ಕಲಿಕ ಪರಿಹಾರವಾಗಿ ಜಲ್ಲಿ ಹುಡಿ ಮಿಶ್ರಣದಿಂದ ದೊಡ್ಡ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಯುತ್ತಿದೆ.

ನ.13 ರಂದು “ವರ್ಷ ಕಳೆದರೂ ಅಭಿವೃದ್ಧಿ ಕಾಣದ ಕುಪ್ಪೆಟ್ಟಿ-ಕಲ್ಲೇರಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಹದಗೆಟ್ಟ ರಸ್ತೆಯಲ್ಲಿ ಸಂಚಾರಕ್ಕೆ ಸಂಚಕಾರ! ಈ ಬಾರಿ ರಸ್ತೆ ಅಭಿವೃದ್ಧಿಯ ಗ್ರಹಣ ಬಿಡುತ್ತಾ ? ಎಂಬ ಶೀರ್ಷಿಕೆಯಡಿ ಸುದ್ದಿ ಉದಯ ವರದಿ ಪ್ರಕಟಿಸಿತ್ತು.” ಪಿಡಬ್ಲೂಡಿ ಇಲಾಖೆ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಸುತ್ತಿದ್ದು ಮುಂದಿನ ದಿನಗಳಲ್ಲಿ ತೇಪೆ ಕಾರ್ಯವು ನಡೆಯಲಿದೆ ಎಂದು ತಿಳಿದು ಬಂದಿದೆ.

ಇದೀಗ ಮತ್ತೆ ಜಲ್ಲಿ ಹುಡಿಗಳಿಂದ ಹೊಂಡ ಮುಚ್ಚತ್ತಿರುವುದರಿಂದ ಧೂಳಿನಿಂದ ಆವೃತ್ತವಾಗಿರುವ ರಸ್ತೆ ಇಕ್ಕೆಲ್ಲೆಗಳು ಸವಾರಿಗೆ ಸಂಕಷ್ಟವಾಗಿ ಕಾಡುತ್ತಿದೆ. ಇನ್ನೂ ಈ ರಸ್ತೆಗೆ ತಾತ್ಕಲಿಕ ಪರಿಹಾರ ಕಂಡುಕೊಳ್ಳವ ಬದಲು ಹೊಸದಾಗಿಯೇ ರಸ್ತೆ ಮಾಡಬೇಕಿದೆ ಎಂಬುವುದು ಪ್ರಯಾಣಿಕರ ಅಭಿಪ್ರಾಯವಾಗಿದೆ. ಉಪ್ಪಿನಂಗಡಿ-ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಉಪ್ಪಿನಂಗಡಿವರೆಗೆ ನಡೆದಾಡಲು ಹಿಂಜರಿಯುವಷ್ಟು ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಕಲ್ಲೇರಿ ಸಮೀಪದ ಶಿವಗಿರಿ ಎಂಬಲ್ಲಿ ರಸ್ತೆ ಮಧ್ಯೆ ಬಾಳೆ ಹಾಗೂ ತೆಂಗಿನ ಗಿಡ, ಕೇಸು ಮತ್ತು ಪಪ್ಪಾಯ ಗಿಡವನ್ನು ನೆಟ್ಟು ನಾಗರಿಕರು ಪ್ರತಿಭಟಿಸಿದ್ದಾರೆ. ನೆಟ್ಟ ಗಿಡಗಳನ್ನು ನ.14 ರಂದು ತೆರವುಗೊಳಿಸಲಾಯಿತು.

Related posts

ಕೊಕ್ಕಡ: ತಿಪ್ಪಮಾಜಲ್ ಮೇರಿ ವರ್ಗಿಸ್ ರವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

Suddi Udaya

ಕನ್ಯಾಡಿ-2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಗರ್ಡಾಡಿ ನಂದಿಬೆಟ್ಟ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!