25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಕುಪೆಟ್ಟಿ, ಕಲ್ಲೇರಿ, ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗುಂಡಿಗಳಿಗೆ ತಾತ್ಕಲಿಕ ಪರಿಹಾರ: ಪ್ರಯಾಣಿಕರಿಗೆ ಧೂಳಿನ ಗೋಳು

ಬೆಳ್ತಂಗಡಿ: ಕುಪೆಟ್ಟಿ. ಕಲ್ಲೇರಿ, ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಅವ್ಯವಸ್ಥೆ ಕುರಿತು ಸುದ್ದಿ ಉದಯ ವಾರಪತ್ರಿಕೆಯಲ್ಲಿ ವರದಿ ಪ್ರಕಟಗೊಂಡ ಬೆನ್ನಲ್ಲೇ ಗುಂಡಿಗಳ ದರ್ಬಾರ್ ರಸ್ತೆಗೆ ತಾತ್ಕಲಿಕ ಪರಿಹಾರವಾಗಿ ಜಲ್ಲಿ ಹುಡಿ ಮಿಶ್ರಣದಿಂದ ದೊಡ್ಡ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಯುತ್ತಿದೆ.

ನ.13 ರಂದು “ವರ್ಷ ಕಳೆದರೂ ಅಭಿವೃದ್ಧಿ ಕಾಣದ ಕುಪ್ಪೆಟ್ಟಿ-ಕಲ್ಲೇರಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಹದಗೆಟ್ಟ ರಸ್ತೆಯಲ್ಲಿ ಸಂಚಾರಕ್ಕೆ ಸಂಚಕಾರ! ಈ ಬಾರಿ ರಸ್ತೆ ಅಭಿವೃದ್ಧಿಯ ಗ್ರಹಣ ಬಿಡುತ್ತಾ ? ಎಂಬ ಶೀರ್ಷಿಕೆಯಡಿ ಸುದ್ದಿ ಉದಯ ವರದಿ ಪ್ರಕಟಿಸಿತ್ತು.” ಪಿಡಬ್ಲೂಡಿ ಇಲಾಖೆ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಸುತ್ತಿದ್ದು ಮುಂದಿನ ದಿನಗಳಲ್ಲಿ ತೇಪೆ ಕಾರ್ಯವು ನಡೆಯಲಿದೆ ಎಂದು ತಿಳಿದು ಬಂದಿದೆ.

ಇದೀಗ ಮತ್ತೆ ಜಲ್ಲಿ ಹುಡಿಗಳಿಂದ ಹೊಂಡ ಮುಚ್ಚತ್ತಿರುವುದರಿಂದ ಧೂಳಿನಿಂದ ಆವೃತ್ತವಾಗಿರುವ ರಸ್ತೆ ಇಕ್ಕೆಲ್ಲೆಗಳು ಸವಾರಿಗೆ ಸಂಕಷ್ಟವಾಗಿ ಕಾಡುತ್ತಿದೆ. ಇನ್ನೂ ಈ ರಸ್ತೆಗೆ ತಾತ್ಕಲಿಕ ಪರಿಹಾರ ಕಂಡುಕೊಳ್ಳವ ಬದಲು ಹೊಸದಾಗಿಯೇ ರಸ್ತೆ ಮಾಡಬೇಕಿದೆ ಎಂಬುವುದು ಪ್ರಯಾಣಿಕರ ಅಭಿಪ್ರಾಯವಾಗಿದೆ. ಉಪ್ಪಿನಂಗಡಿ-ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಉಪ್ಪಿನಂಗಡಿವರೆಗೆ ನಡೆದಾಡಲು ಹಿಂಜರಿಯುವಷ್ಟು ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಕಲ್ಲೇರಿ ಸಮೀಪದ ಶಿವಗಿರಿ ಎಂಬಲ್ಲಿ ರಸ್ತೆ ಮಧ್ಯೆ ಬಾಳೆ ಹಾಗೂ ತೆಂಗಿನ ಗಿಡ, ಕೇಸು ಮತ್ತು ಪಪ್ಪಾಯ ಗಿಡವನ್ನು ನೆಟ್ಟು ನಾಗರಿಕರು ಪ್ರತಿಭಟಿಸಿದ್ದಾರೆ. ನೆಟ್ಟ ಗಿಡಗಳನ್ನು ನ.14 ರಂದು ತೆರವುಗೊಳಿಸಲಾಯಿತು.

Related posts

ಜೂ. 21: ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವತಿಯಿಂದ 12 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ್‍ಯಾಂಕ್

Suddi Udaya

ಬೀಡಿ ಬ್ರಾಂಚ್ ನ ಕಟ್ಟಡದ ಅಡ್ಡಕ್ಕೆ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ

Suddi Udaya

ರಾಷ್ಟ್ರಮಟ್ಟದ ಸಿ ಎ ಪರೀಕ್ಷೆ: ಪ್ರಥಮ ಯತ್ನದಲ್ಲೇ ಮಿಂಚಿದ ಎಕ್ಸೆಲ್ ನ ಪ್ರಥಮ ಬ್ಯಾಚ್ ನ ವಿದ್ಯಾರ್ಥಿಗಳು

Suddi Udaya

ಉಜಿರೆ: ‘ಎಸ್.ಡಿ.ಎಂ. ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya
error: Content is protected !!