July 23, 2026
ಗ್ರಾಮಾಂತರ ಸುದ್ದಿಧಾರ್ಮಿಕವರದಿ

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿ ಬಂದ ಸಾವಿರ ಸಾವಿರ ಭಕ್ತರು ಶ್ರೀ ಕ್ಷೇತ್ರದ ಮುಖ್ಯ ದ್ವಾರದಲ್ಲಿ ಡಿ.ಹರ್ಷೆಂದ್ರ ಕುಮಾರ್ ರವರಿಂದ ಭಕ್ತರಿಗೆ ಭವ್ಯ ಸ್ವಾಗತ

ಧರ್ಮಸ್ಥಳ: ಲಕ್ಷ ದೀಪೋತ್ಸವದ ಸಂಭ್ರಮದಲ್ಲಿರುವ ನಾಡಿನ ಪವಿತ್ರ ಪುಣ್ಯಕ್ಷೇತ್ರ ಶ್ರೀ ಧರ್ಮಸ್ಥಳಕ್ಕೆ ಸಾವಿರ ಸಾವಿರ ಸಂಖ್ಯೆಯಲ್ಲಿ ಭಕ್ತರು ಪಾದಯಾತ್ರೆಯ ಮೂಲಕ ನ.15 ರಂದು ಆಗಮಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಮುಖ್ಯದ್ವಾರದಲ್ಲಿ ಕ್ಷೇತ್ರದ ವತಿಯಿಂದ ಡಿ.ಹರ್ಷೇಂದ್ರ ಕುಮಾರ್ ಭಕ್ತರನ್ನು ಆತ್ಮೀಯವಾಗಿ ಬರಮಾಡಿಕೊಂಡು ಸ್ವಾಗತಿಸಿದರು.

ಪಾದಯಾತ್ರೆಯುದ್ದಕ್ಕೂ ಎಸ್.ಡಿ.ಎಂ ಕಾಲೇಜು,ಓಷಿಯನ್ ಪರ್ಲ್,ಸಿದ್ದವನ,ಸೇವಾ ಭಾರತಿ,ಕನ್ಯಾಡಿ,ನೇತ್ರಾವತಿ ಹಾಗೂ ವಿವಿಧ ಕಡೆಗಳಲ್ಲಿ ಭಕ್ತಾದಿಗಳಿಗೆ ಬೆಲ್ಲ ನೀರು, ಮಚ್ಚಿಗೆ,ಶರಬತ್ತು,ಪಾನಕಾ ನೀಡಿ ಈ ಭಾಗದವರು ಸಹಕರಿಸಿದರು. ಕುಣಿತಾ ಭಜನೆ, ಚೆಂಡೆ,ವಾಲಕ,ಆನೆ,ಶಿವನ ಮೂರ್ತಿ,ಟ್ಯಾಬ್ಲೋಗಳು ಪಾದಯಾತ್ರೆಗೆ ಮೆರಗು ನೀಡಿತು.

ಪಾದಯಾತ್ರೆಯಲ್ಲಿ ಶಾಸಕ ಹರೀಶ್ ಪೂಂಜ,ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೆಸರ ಶರತ್ ಕೃಷ್ಣ ಪಡ್ವಟ್ನಾಯ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್,ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ,ಉದ್ಯಮಿ ಮೋಹನ್ ಕುಮಾರ್ ಲಕ್ಷ್ಮೀ ಇಂಡಸ್ಟ್ರೀಸ್ ಉಜಿರೆ,ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ,ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್,ಪ್ರಮುಖರಾದ ಪೂರನ್ ವರ್ಮ, ಎಸ್.ಕೆ.ಡಿ.ಆರ್.ಡಿ.ಪಿ ಮುಖ್ಯ ನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಎಸ್.ಎಸ್,ಕೆ.ವಸಂತ ಸಾಲಿಯಾನ್ ಹಾಗೂ ಸಾವಿರಾರು ಭಕ್ತರು ಇದ್ದರು.

Related posts

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕುವೆಟ್ಟು ಅನಧಿಕೃತವಾಗಿ ನಿರ್ಮಿಸುತ್ತಿರುವ ಕಟ್ಟಡ ರಚನೆ ಕಾಮಗಾರಿ ಸ್ಥಗಿತ

Suddi Udaya

ಶಿರ್ಲಾಲು ನಲ್ಲಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ಕೆಸರುಡೊಂಜಿ ದಿನ

Suddi Udaya

ಕುಂಭಶ್ರೀ ಆಂ.ಮಾ. ಶಾಲೆ ಪಿಯು ಕಾಲೇಜಿನಲ್ಲಿ “ಮಾದಕ ವಸ್ತುಗಳ ದುರುಪಯೋಗ ವಿರೋಧಿ ಜಾಗೃತಿ ಅಭಿಯಾನ”

Suddi Udaya

ಗ್ಯಾಸ್ ಸಿಲಿಂಡ‌ರ್ ನೀಡಲು ನಿರಾಕರಣೆ ಮಾಡಿದ ವಿತರಕನ ಮೇಲೆ ಹಲ್ಲೆ: ಪ್ರಕರಣ ದಾಖಲು

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆಯಲ್ಲಿ ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya
error: Content is protected !!