23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ:ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಚಿಣ್ಣರ ಕಲರವ – ಕ್ರೀಡಾಸಂಗಮ

ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯಿಂದ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮ ದಿನಾಚರಣೆಯ ಅಂಗವಾಗಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಚಿಣ್ಣರ ಕಲರವ- ಕ್ರೀಡಾಸಂಗಮ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು .

ಉದ್ಘಾಟನಾ ಕಾರ್ಯಕ್ರಮದಲ್ಲಿ ವo. ಸ್ವಾಮಿ ಜೆರೋಮ್ ಡಿಸೋಜಾ ಅಧ್ಯಕ್ಷತೆಯನ್ನು ವಹಿಸಿ ಶುಭ ಹಾರೈಸಿದರು. ಅಂತರರಾಷ್ಟ್ರೀಯ ತ್ರೋಬಾಲ್ ಆಟಗಾರ್ತಿ , ಕುಮಾರಿ ವಿಲೋನ ಡಿಸೋಜ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸಂಜಯ್ ಮಿರಾಂದ, ಕಾರ್ಯದರ್ಶಿ ಶ್ರೀಮತಿ ಎವಿಜಿನ್ ರೋಡ್ರಿಗಸ್ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಸಂತ ಅಂತೋನಿ ಕಾಲೇಜಿನ ಪ್ರಾಂಶುಪಾಲ ಸಂತೋಷ್ ಸಲ್ದಾನ, ನಾರಾವಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗೋಪಾಲಕೃಷ್ಣ ತುಳುಪುಳೆ, ಸಂತ ಪಾವಲರ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ರಿಚರ್ಡ್ ಮೊರಸ್, ಸಂತ ಪಾವಲರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸೋಫಿಯಾ ಪೆರ್ನಾಂಡಿಸ್, ಪದವಿ ಕಾಲೇಜಿನ ಉಪನ್ಯಾಸಕರಾದ ವo. ಸ್ವಾಮಿ ರೂಪೇಶ್ ತಾವ್ರೊ ಉಪಸ್ಥಿತರಿದ್ದರು.

ಗೋಪಾಲಕೃಷ್ಣ ತುಳುಪುಳೆ ಸ್ವಾಗತಿಸಿ, ರಿಚರ್ಡ್ ಮೊರಸ್ ವಂದಿಸಿದರು. ಶಿಕ್ಷಕಿ ರೆನಿಟಾ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಎಲ್ ಕೆ ಜಿ ಯಿಂದ ಪದವಿ ತರಗತಿಯವರೆಗೆ ಎಲ್ಲಾ ಮಕ್ಕಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ ಹಾಗೂ ತ್ರೋಬಾಲ್ ಪಂದ್ಯಗಳು ಎಲ್ಲರ ಮನಸೂರೆಗೊಂಡವು. ಶಾಲಾ ಮೈದಾನದಲ್ಲಿ ಬೆಳಗ್ಗಿನಿಂದ ಸಂಜೆಯ ವರೆಗೆ ಮಿತದರದಲ್ಲಿ ಆಹಾರ ಮೇಳವನ್ನು ಏರ್ಪಡಿಸಲಾಗಿತ್ತು.

Related posts

ಉಜಿರೆ: ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

Suddi Udaya

ಒಕಿನಾವನ್ ಶೋಟೋಕಾನ್ ಕರಾಟೆ ಚಾಂಪಿಯನ್‌ಶಿಪ್ : ಬೆಳ್ತಂಗಡಿಯ ಅವಳಿ ಮಕ್ಕಳು ವಿಜೇತರು

Suddi Udaya

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ಗೌರವ ನಮನ

Suddi Udaya

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ

Suddi Udaya
error: Content is protected !!