September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರ್ಲ ಬೈಪಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಪೆರ್ಲ ಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025ನೇ ಸಾಲಿನ ಕುಪ್ಪೆಟ್ಟಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡುಗೈ ದಾನಿಗಳಾದ ಜಯಣ್ಣಗೌಡ ಮೀನಾಂದೇಲು ಉದ್ಘಾಟಿಸಿ ಶುಭ ಹಾರೈಸಿ, ಕಾರ್ಯಕ್ರಮಕ್ಕೆ ಹತ್ತು ಸಾವಿರ ರೂಪಾಯಿ ಸಹಾಯಧನನ್ನು ನೀಡಿದರು.
ಕಾರ್ಯಕ್ರಮದಲ್ಲಿ ದಾನಿಗಳಾದ ತಿಮ್ಮಪ್ಪ ಗೌಡ ಸೋಣಕುಮೇರು, ಗ್ರಾಮ ಪಂಚಾಯಿತಿ ಸದಸ್ಯರಾದ ಅನಿತ ಕೆ ಹಾಗೂ ಭಾರತಿ ಕೆ ಉಪಸ್ಥಿತರಿದ್ದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಸಹ ಶಿಕ್ಷಕ ವಿಜಯ ಕುಮಾರ ಇವರನ್ನು ಗೌರವಿಸಲಾಯಿತು.


ವಿವಿಧ ಕೊಠಡಿಗಳಲ್ಲಿ ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಗಳು ಜರುಗಿದ್ದು ಈ ಸ್ಪರ್ಧೆಗಳಲ್ಲಿ 16 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಿರಿಯ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮೈರೋಲ್ತಡ್ಕದ ವಿದ್ಯಾರ್ಥಿಗಳು ಪಡೆದುಕೊಂಡರೆ ದ್ವಿತೀಯ ಸಮಗ್ರವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪದ್ಮುಂಜದ ವಿದ್ಯಾರ್ಥಿಗಳು ಪಡೆದುಕೊಂಡರು. ಹಿರಿಯರ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಶ್ರೀ ಭಾರತಿ ಉರುವಾಲು, ದ್ವಿತೀಯ ಸಮಗ್ರವನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮೈರೋಲ್ತಡ್ಕ ಪಡೆದುಕೊಂಡಿದೆ.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು, ಕೋಶಾಧಿಕಾರಿಯಾಗಿ ಪುಷ್ಪರಾಜ್ ಆಯ್ಕೆ

Suddi Udaya

ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಶೇಖರ್ ಲಾಯಿಲ ನೇಮಕ

Suddi Udaya

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಭೀಮಾ ಕೋರೆಗಾಂವ್ ವಿಜಯೋತ್ಸವದ ದಿನಾಚರಣೆ ಪ್ರಯುಕ್ತ ಸ್ವಾಭಿಮಾನಿ ದಿಗ್ವಿಜಯ ಹಾಗೂ ಬಿವಿಎಫ್ ಪದಗ್ರಹಣ

Suddi Udaya

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

Suddi Udaya
error: Content is protected !!