25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರ್ಲ ಬೈಪಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಪೆರ್ಲ ಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025ನೇ ಸಾಲಿನ ಕುಪ್ಪೆಟ್ಟಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡುಗೈ ದಾನಿಗಳಾದ ಜಯಣ್ಣಗೌಡ ಮೀನಾಂದೇಲು ಉದ್ಘಾಟಿಸಿ ಶುಭ ಹಾರೈಸಿ, ಕಾರ್ಯಕ್ರಮಕ್ಕೆ ಹತ್ತು ಸಾವಿರ ರೂಪಾಯಿ ಸಹಾಯಧನನ್ನು ನೀಡಿದರು.
ಕಾರ್ಯಕ್ರಮದಲ್ಲಿ ದಾನಿಗಳಾದ ತಿಮ್ಮಪ್ಪ ಗೌಡ ಸೋಣಕುಮೇರು, ಗ್ರಾಮ ಪಂಚಾಯಿತಿ ಸದಸ್ಯರಾದ ಅನಿತ ಕೆ ಹಾಗೂ ಭಾರತಿ ಕೆ ಉಪಸ್ಥಿತರಿದ್ದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಸಹ ಶಿಕ್ಷಕ ವಿಜಯ ಕುಮಾರ ಇವರನ್ನು ಗೌರವಿಸಲಾಯಿತು.


ವಿವಿಧ ಕೊಠಡಿಗಳಲ್ಲಿ ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಗಳು ಜರುಗಿದ್ದು ಈ ಸ್ಪರ್ಧೆಗಳಲ್ಲಿ 16 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಿರಿಯ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮೈರೋಲ್ತಡ್ಕದ ವಿದ್ಯಾರ್ಥಿಗಳು ಪಡೆದುಕೊಂಡರೆ ದ್ವಿತೀಯ ಸಮಗ್ರವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪದ್ಮುಂಜದ ವಿದ್ಯಾರ್ಥಿಗಳು ಪಡೆದುಕೊಂಡರು. ಹಿರಿಯರ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಶ್ರೀ ಭಾರತಿ ಉರುವಾಲು, ದ್ವಿತೀಯ ಸಮಗ್ರವನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮೈರೋಲ್ತಡ್ಕ ಪಡೆದುಕೊಂಡಿದೆ.

Related posts

ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಸಾರ್ವಜನಿಕ ಸಮಾವೇಶ

Suddi Udaya

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

Suddi Udaya

ಮರೋಡಿ: ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

Suddi Udaya

ಸಾಮೂಹಿಕ ವರ ಮಹಾಲಕ್ಷ್ಮೀ ಪೂಜೆ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ-ತಾರಾ ದಂಪತಿ ಯವರಿಂದ 1,300 ಮಂದಿಗೆ ಸೀರೆ ವಿತರಣೆ

Suddi Udaya
error: Content is protected !!