23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನ.14 ರಂದು ಮಕ್ಕಳ ದಿನಾಚರಣೆ ಆಚರಿಸಲಾಯಿತು.
ನೆಹರೂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಶುಭಾಶಯ ತಿಳಿಸಿದರು.

ಮಕ್ಕಳ ದಿನಾಚರಣೆಯ ವಿಶೇಷತೆ ಬಗ್ಗೆ 8ನೇ ತರಗತಿ ವಿದ್ಯಾರ್ಥಿನಿ ವಿದ್ಯಾ ಮಾತನಾಡಿದರು.

ಬಿ ಎಡ್ ಪ್ರಶಿಕ್ಷಣಾರ್ಥಿ ಮಕ್ಕಳ ದಿನಾಚರಣೆಯ ಕುರಿತು ಹಾಡನ್ನು ಹಾಡಿದರು.

ವೇದಿಕೆಯಲ್ಲಿ ಶಿಕ್ಷಕ ವೃಂದವರು, ಬಿ ಎಡ್ ಪ್ರಶಿಕ್ಷಣಾರ್ಥಿಗಳು ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

10ನೇ ತರಗತಿಯ ತ್ರಿಷಾ ಜೈನ್ ಕಾರ್ಯಕ್ರಮ ನಿರೂಪಿಸಿದರು.

ಇದೇ ಸಂದರ್ಭದಲ್ಲಿ ದಿ ಹಿಂದೂ ಪತ್ರಿಕೆಯ ನೆಹರೂ ಕುರಿತ ವಿಶೇಷ ಆಂಗ್ಲ ಅವತರಣಿಕೆಯನ್ನು ಎಲ್ಲಾ ಮಕ್ಕಳಿಗೆ ಉಚಿತವಾಗಿ ಹಂಚಲಾಯಿತು.

Related posts

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಉಜಿರೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಬೆಳ್ತಂಗಡಿ: ಪಹಣಿಗಳಿಗೆ ಆಧಾರ್ ಜೋಡನೆ ಆಂದೋಲನ

Suddi Udaya

ಎ.30: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya

ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಧನ ಸಂಗ್ರಹ, ಹಸ್ತಾಂತರ

Suddi Udaya

ಗೇರುಕಟ್ಟೆ :ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!