September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯ ವಕೀಲರ ಸಂಘದ ಚುನಾವಣೆ: ಬಿರುಸಿನ ಮತದಾನ

ಬೆಳ್ತಂಗಡಿ: ಬೆಳ್ತಂಗಡಿಯ ವಕೀಲರ ಸಂಘದ ಚುನಾವಣೆಯಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಘಟಾನುಘಟಿಗಳು ಸ್ಪರ್ಧೆಗೆ ಇಳಿದಿರುವುದರಿಂದ ಚುನಾವಣಾ ಕಣ ಜಿದ್ದಾಜಿದ್ದಿನಿಂದ ಕೂಡಿದೆ.

ಬೆಳಿಗ್ಗೆ ಗಂಟೆ 10.30 ರಿಂದ ಮತದಾನ ಪ್ರಕ್ರಿಯೆಗಳು ಪ್ರಾರಂಭಗೊಂಡಿದ್ದು, ಮತದಾನವು ಸಂಜೆ 4 ಗಂಟೆಯ ತನಕ ನಡೆಯಲಿದೆ. ಬಳಿಕ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

ಅಧ್ಯಕ್ಷ ಸ್ಥಾನಕ್ಕೆ ಹಿರಿಯ ವಕೀಲರಾದ ಅಲೋಶಿಯಸ್ ಎಸ್. ಲೋಬೊ ಮತ್ತು ಕೇಶವ ಪಿ. ಬೆಳಾಲು ನಡುವೆ ನೇರ ಹಣಾಹಣಿ ಉಂಟಾಗಿದ್ದು ತೀವ್ರ ಪೈಪೋಟಿ ಏರ್ಪಟ್ಟಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಏಕೈಕ ಅಭ್ಯರ್ಥಿಯಾಗಿದ್ದ ಶ್ರೀನಿವಾಸ ಗೌಡ ಬೆಳಾಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹರಿಪ್ರಕಾಶ್ ಪಿ.ಎನ್. ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವರು ಅವಿರೋಧ ಆಯ್ಕೆ ಆಗುತ್ತಾರೆ ಎಂದು ಅಂದಾಜಿಸಲಾಗಿತ್ತು. ಆದರೆ, ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಹರಿಪ್ರಕಾಶ್ ಪಿ.ಎನ್. ನಾಮಪತ್ರ ಹಿಂಪಡೆದಿದ್ದು ಆ ಸ್ಥಾನಕ್ಕೆ ಯಾರೂ ಅಭ್ಯರ್ಥಿಗಳೇ ಇಲ್ಲದಂತಾಗಿದೆ. ಹೊಸ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆದ ಬಳಿಕ ಪ್ರಧಾನ ಕಾರ್ಯದರ್ಶಿಯನ್ನು ಆಯ್ಕೆ ಮಾಡಲಾಗುತ್ತದೆ.

Related posts

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಆರೋಗ್ಯ ಕಾಳಜಿ ಬಗ್ಗೆ ಕಾರ್ಯಾಗಾರ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಂ ಜನ್ಮದಿನ ಆಚರಣೆ

Suddi Udaya

ಮಾ.7-8: ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರ ಪಾರಾಯಣ, ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಜೂ. 24: ಕೊಕ್ಕಡ ಮತ್ತು ಪಟ್ರಮೆಯಲ್ಲಿ ಜನರ ಬಳಿಗೆ -ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ಬೆಳ್ತಂಗಡಿ ಹಾಗೂ 9 ವಲಯಗಳ ಆಶ್ರಯದಲ್ಲಿ ಆಟಿದ ಕಮ್ಮೆನ ಮತ್ತು ಆಟೋಟ ಸ್ಪರ್ಧೆ

Suddi Udaya

ಬೈಂದೂರಿನಲ್ಲಿ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರ ಚಾತುರ್ಮಾಸ್ಯ ವ್ರತಾಚರಣೆಗೆ ವೈಭವದ ಚಾಲನೆ

Suddi Udaya
error: Content is protected !!