23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಅಲೋಶಿಯಸ್ ಎಸ್. ಲೋಬೊ; ಉಪಾಧ್ಯಕ್ಷರಾಗಿ ಶ್ರೀನಿವಾಸ್ ಗೌಡ ಬೆಳಾಲು, ಕೋಶಾಧಿಕಾರಿಯಾಗಿ ಮುಮ್ತಾಜ್ ಬೇಗಂ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ವಕೀಲರ ಸಂಘದ ಚುನಾವಣೆಯು ನ.15ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ನಡೆದಿದ್ದು ಸ್ಪರ್ಧಿಗಳ ಅಂತಿಮ ಫಲಿತಾಂಶ ಪ್ರಕಟಗೊಂಡಿದೆ.

ಅಧ್ಯಕ್ಷ ಸ್ಥಾನಕ್ಕೆ ಅಲೋಶಿಯಸ್ ಎಸ್. ಲೋಬೊ ಮತ್ತು ಕೇಶವ ಪಿ. ನಾಮಪತ್ರ ಸಲ್ಲಿಸಿದ್ದು ಇವರೀರ್ವರಲ್ಲಿ ಅಲೋಶಿಯಸ್ ಎಸ್. ಲೋಬೊ 72 ಮತಗಳನ್ನು ಪಡೆದು ಗೆಲುವನ್ನು ಸಾಧಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕೇಶವ ಪಿ ಕೇವಲ 48 ಮತಗಳನ್ನು ಪಡೆದು 24 ಮತಗಳ ಅಂತರದಲ್ಲಿ ಸೋಲನ್ನು ಕಂಡಿದ್ದಾರೆ.

ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹರಿಪ್ರಕಾಶ್ ಪಿ.ಎನ್ ಸಲ್ಲಿಸಿದ್ದ ನಾಮಪತ್ರವನ್ನು ಹಿಂಪಡೆದ ಕಾರಣ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಯಾವುದೇ ಅಭ್ಯರ್ಥಿಗಳು ಇಲ್ಲದಂತಾಗಿದೆ. ಇನ್ನೂ ಉಳಿದಂತೆ ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸ ಗೌಡ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಜೊತೆ ಕಾರ್ಯದರ್ಶಿ ಸ್ಥಾನಕ್ಕೆ ಹರ್ಷಿತ್ ಹೆಚ್. ನಾಮಪತ್ರವನ್ನು ಸಲ್ಲಿಸಿದ್ದು ಅವರು ಕೂಡಾ ಅವಿರೋಧ ಆಯ್ಕೆಯಾಗಿದ್ದಾರೆ.

ಕೋಶಾಧಿಕಾರಿ ಸ್ಥಾನಕ್ಕೆ ಮುಮ್ತಾಜ್ ಬೇಗಂ ಮತ್ತು ಸುಜಾತ ನಾಮಪತ್ರ ಸಲ್ಲಿಸಿದ್ದು ಇವರೀರ್ವರಲ್ಲಿ ಮುಮ್ತಾಜ್ ಬೇಗಂ ಗೆಲುವನ್ನು ಸಾಧಿಸಿ ಕೋಶಾಧಿಕಾರಿ ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ15 ವರ್ಷಕ್ಕಿಂತ ಮೇಲ್ಪಟ್ಟು ಸದಸ್ಯತ್ವ ಹೊಂದಿದ ಅನುಭವವುಳ್ಳ ಮೂರು ಸ್ಥಾನಗಳಿಗೆ ಶ್ರೀಕೃಷ್ಣ ಶೆಣೈ ಕೆ., ವಸಂತ ಮರಕಡ, ಸೇವಿಯರ್ ಪಾಲೇಲಿ ಅವಿರೋಧ ಆಯ್ಕೆಯಾಗಿದ್ದಾರೆ.

ಹತ್ತು ವರ್ಷಕ್ಕಿಂತ ಮೇಲ್ಪಟ್ಟು 15 ವರ್ಷದೊಳಗೆ ಸದಸ್ಯತ್ವ ಹೊಂದಿದ ಅನುಭವವುಳ್ಳ 3 ಸ್ಥಾನಗಳಿಗೆ ಪ್ರಶಾಂತ್ ಎಂ, ಅಸ್ಮಾ, ದಿನೇಶ್, ಧನಂಜಯ ಕುಮಾರ್ ಡಿ ನಾಮಪತ್ರ ಸಲ್ಲಿಸಿದ್ದು, ಈ ಪೈಕಿ ಪ್ರಶಾಂತ್ ಎಂ, ಅಸ್ಮಾ, ದಿನೇಶ್, ಗೆಲುವನ್ನು ಸಾಧಿಸಿದ್ದಾರೆ.

ಮೂರು ವರ್ಷಕ್ಕಿಂತ ಮೇಲ್ಪಟ್ಟು ಹತ್ತು ವರ್ಷಕ್ಕಿಂತ ಒಳಗೆ ಸದಸ್ಯತ್ವ ಹೊಂದಿದ ಅನುಭವವುಳ್ಳ ೪ ಸ್ಥಾನಗಳಿಗೆ ಉಷಾ ಎನ್.ಜಿ, ಸಂದೀಪ್ ಡಿ’ಸೋಜ, ಲತಾಶ್ರೀ, ಸೌಮ್ಯ ಪಿ. ಮತ್ತು ಪ್ರಮೀಳಾ ಶೆಟ್ಟಿ ನಾಮಪತ್ರ ಸಲ್ಲಿಸಿದ್ದು, ಉಷಾ ಎನ್.ಜಿ, ಸಂದೀಪ್ ಡಿ’ಸೋಜ, ಲತಾಶ್ರೀ, ಸೌಮ್ಯ ಪಿ. ಗೆಲುವನ್ನು ಸಾಧಿಸಿದ್ದಾರೆ.

ಮುಖ್ಯ ಚುನಾವಣಾಧಿಕಾರಿಯಾಗಿ ಹಿರಿಯ ವಕೀಲ ಬದರಿನಾಥ ಎಂ. ಸಂಪಿಗೆತ್ತಾಯ ಕಾರ್ಯ ನಿರ್ವಹಿಸಿದ್ದಾರೆ. ಚಿದಾನಂದ ಪೂಜಾರಿ, ಆನಂದ್ ಕುಮಾರ್ ಎಮ್.ಸಿ. ಮತ್ತು ಜೋಬಿ ಜಾಯ್ ಸಹಾಯಕ ಚುನಾವಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದರು.

Related posts

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

Suddi Udaya

ಜೆ ಇ ಇ ಮೈನ್ ಪರೀಕ್ಷೆ: ಮೂಡುಬಿದಿರೆ ಎಕ್ಸಲೆಂಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

Suddi Udaya

ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬಜಿರೆ‌ ಕೊರಗಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಮಾಡಿದ ಆರೋಪ: ಐವರ ಮೇಲೆ ಪ್ರಕರಣ: ಓವ೯ರ ಬಂಧನ

Suddi Udaya

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!