July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಅಲೋಶಿಯಸ್ ಎಸ್. ಲೋಬೊ; ಉಪಾಧ್ಯಕ್ಷರಾಗಿ ಶ್ರೀನಿವಾಸ್ ಗೌಡ ಬೆಳಾಲು, ಕೋಶಾಧಿಕಾರಿಯಾಗಿ ಮುಮ್ತಾಜ್ ಬೇಗಂ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ವಕೀಲರ ಸಂಘದ ಚುನಾವಣೆಯು ನ.15ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ನಡೆದಿದ್ದು ಸ್ಪರ್ಧಿಗಳ ಅಂತಿಮ ಫಲಿತಾಂಶ ಪ್ರಕಟಗೊಂಡಿದೆ.

ಅಧ್ಯಕ್ಷ ಸ್ಥಾನಕ್ಕೆ ಅಲೋಶಿಯಸ್ ಎಸ್. ಲೋಬೊ ಮತ್ತು ಕೇಶವ ಪಿ. ನಾಮಪತ್ರ ಸಲ್ಲಿಸಿದ್ದು ಇವರೀರ್ವರಲ್ಲಿ ಅಲೋಶಿಯಸ್ ಎಸ್. ಲೋಬೊ 72 ಮತಗಳನ್ನು ಪಡೆದು ಗೆಲುವನ್ನು ಸಾಧಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕೇಶವ ಪಿ ಕೇವಲ 48 ಮತಗಳನ್ನು ಪಡೆದು 24 ಮತಗಳ ಅಂತರದಲ್ಲಿ ಸೋಲನ್ನು ಕಂಡಿದ್ದಾರೆ.

ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹರಿಪ್ರಕಾಶ್ ಪಿ.ಎನ್ ಸಲ್ಲಿಸಿದ್ದ ನಾಮಪತ್ರವನ್ನು ಹಿಂಪಡೆದ ಕಾರಣ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಯಾವುದೇ ಅಭ್ಯರ್ಥಿಗಳು ಇಲ್ಲದಂತಾಗಿದೆ. ಇನ್ನೂ ಉಳಿದಂತೆ ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸ ಗೌಡ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಜೊತೆ ಕಾರ್ಯದರ್ಶಿ ಸ್ಥಾನಕ್ಕೆ ಹರ್ಷಿತ್ ಹೆಚ್. ನಾಮಪತ್ರವನ್ನು ಸಲ್ಲಿಸಿದ್ದು ಅವರು ಕೂಡಾ ಅವಿರೋಧ ಆಯ್ಕೆಯಾಗಿದ್ದಾರೆ.

ಕೋಶಾಧಿಕಾರಿ ಸ್ಥಾನಕ್ಕೆ ಮುಮ್ತಾಜ್ ಬೇಗಂ ಮತ್ತು ಸುಜಾತ ನಾಮಪತ್ರ ಸಲ್ಲಿಸಿದ್ದು ಇವರೀರ್ವರಲ್ಲಿ ಮುಮ್ತಾಜ್ ಬೇಗಂ ಗೆಲುವನ್ನು ಸಾಧಿಸಿ ಕೋಶಾಧಿಕಾರಿ ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ15 ವರ್ಷಕ್ಕಿಂತ ಮೇಲ್ಪಟ್ಟು ಸದಸ್ಯತ್ವ ಹೊಂದಿದ ಅನುಭವವುಳ್ಳ ಮೂರು ಸ್ಥಾನಗಳಿಗೆ ಶ್ರೀಕೃಷ್ಣ ಶೆಣೈ ಕೆ., ವಸಂತ ಮರಕಡ, ಸೇವಿಯರ್ ಪಾಲೇಲಿ ಅವಿರೋಧ ಆಯ್ಕೆಯಾಗಿದ್ದಾರೆ.

ಹತ್ತು ವರ್ಷಕ್ಕಿಂತ ಮೇಲ್ಪಟ್ಟು 15 ವರ್ಷದೊಳಗೆ ಸದಸ್ಯತ್ವ ಹೊಂದಿದ ಅನುಭವವುಳ್ಳ 3 ಸ್ಥಾನಗಳಿಗೆ ಪ್ರಶಾಂತ್ ಎಂ, ಅಸ್ಮಾ, ದಿನೇಶ್, ಧನಂಜಯ ಕುಮಾರ್ ಡಿ ನಾಮಪತ್ರ ಸಲ್ಲಿಸಿದ್ದು, ಈ ಪೈಕಿ ಪ್ರಶಾಂತ್ ಎಂ, ಅಸ್ಮಾ, ದಿನೇಶ್, ಗೆಲುವನ್ನು ಸಾಧಿಸಿದ್ದಾರೆ.

ಮೂರು ವರ್ಷಕ್ಕಿಂತ ಮೇಲ್ಪಟ್ಟು ಹತ್ತು ವರ್ಷಕ್ಕಿಂತ ಒಳಗೆ ಸದಸ್ಯತ್ವ ಹೊಂದಿದ ಅನುಭವವುಳ್ಳ ೪ ಸ್ಥಾನಗಳಿಗೆ ಉಷಾ ಎನ್.ಜಿ, ಸಂದೀಪ್ ಡಿ’ಸೋಜ, ಲತಾಶ್ರೀ, ಸೌಮ್ಯ ಪಿ. ಮತ್ತು ಪ್ರಮೀಳಾ ಶೆಟ್ಟಿ ನಾಮಪತ್ರ ಸಲ್ಲಿಸಿದ್ದು, ಉಷಾ ಎನ್.ಜಿ, ಸಂದೀಪ್ ಡಿ’ಸೋಜ, ಲತಾಶ್ರೀ, ಸೌಮ್ಯ ಪಿ. ಗೆಲುವನ್ನು ಸಾಧಿಸಿದ್ದಾರೆ.

ಮುಖ್ಯ ಚುನಾವಣಾಧಿಕಾರಿಯಾಗಿ ಹಿರಿಯ ವಕೀಲ ಬದರಿನಾಥ ಎಂ. ಸಂಪಿಗೆತ್ತಾಯ ಕಾರ್ಯ ನಿರ್ವಹಿಸಿದ್ದಾರೆ. ಚಿದಾನಂದ ಪೂಜಾರಿ, ಆನಂದ್ ಕುಮಾರ್ ಎಮ್.ಸಿ. ಮತ್ತು ಜೋಬಿ ಜಾಯ್ ಸಹಾಯಕ ಚುನಾವಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದರು.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಕ್ರಿಸ್ಮಸ್ ಸಂಭ್ರಮ

Suddi Udaya

ಪುದುವೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಶೇ.40ರಷ್ಟು ಡಿಸ್ಕೌಂಟ್ ಸೇಲ್

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!