22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ವತಿಯಿಂದ ಪರಿಸರ ಪಾಠ ಹಾಗೂ ಸಾಲುಮರದ ತಿಮ್ಮಕ್ಕ ರವರಿಗೆ ನುಡಿನಮನ

ಉಜಿರೆ: ಭಾರತದಲ್ಲಿ ನಾಲ್ಕು ಜೈವಿಕ ವೈವಿಧ್ಯ ತಾಣಗಳಿವೆ. ಹಿಮಾಲಯ, ಪೂರ್ವ ಹಿಮಾಲಯ, ಇಂಡೋ-ಬರ್ಮಾ ಮತ್ತು ಪಶ್ಚಿಮ ಘಟ್ಟ. ಈ ತಾಣಗಳು ಹೆಚ್ಚಿನ ಸಂಖ್ಯೆಯ ವಿಶಿಷ್ಟ ಪ್ರಭೇದಗಳನ್ನು ಹೊಂದಿವೆ ಮತ್ತು ವಿಪರೀತ ಮಾನವ ಚಟುವಟಿಕೆ ಮತ್ತು ಆವಾಸಸ್ಥಾನ ನಷ್ಟದಿಂದಾಗಿ ಸಂರಕ್ಷಣೆಗೆ ಆದ್ಯತೆ ನೀಡಬೇಕಾದ ಪ್ರದೇಶಗಳಾಗಿವೆ. ಪಶ್ಚಿಮ ಘಟ್ಟ ಜೀವ ವೈವಿಧ್ಯಗಳ ಆಗರವಾಗಿದೆ. ಉಜಿರೆಯ ಯಶೋವನ ಕೂಡ ವಿಶಿಷ್ಟವಾದ ವೃಕ್ಷಾಲಯವಾಗಿದೆ. ಪ್ರತಿಯೊಬ್ಬರಿಗೂ ಪರಿಸರದ ಕಾಳಜಿ ಬೇಕು. ಪರಿಸರ ಹಾಗೂ ಜೀವ ವೈವಿಧ್ಯ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಮೇಘಾ ಶಿವರಾಜ್ ಹೇಳಿದರು

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಸಂಘದ ವತಿಯಿಂದ ನಡೆದ ಪರಿಸರ ಪಾಠ ಹಾಗೂ ಸಾಲುಮರದ ತಿಮ್ಮಕ್ಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ಸಾಲು ಮರದ ತಿಮ್ಮಕ್ಕ ಅವರ ಪ್ರಕೃತಿ ಪ್ರೇಮ ಹಾಗೂ ಅವರ ಪರಿಸರ ಕಾಳಜಿಯ ಕೊಡುಗೆಗಳನ್ನು ಸ್ಮರಿಸಿದರು. ಇದರೊಂದಿಗೆ ಆಯುಷ್ ಸಚಿವಾಲಯ ಪ್ರಾಯೋಜಕತ್ವದ ಜನಜ್ಞಾನಾಧಾರಿತ ಔಷಧೀಯ ಸಸ್ಯಗಳ ಆಧಾರದ ಮೇಲೆ ನಿರ್ಮಿಸಿದ ಸಸ್ಯೋದ್ಯಾನ , ನವಗ್ರಹ ವನ , ರಾಶಿ ವನ , ಹಸಿರು ಮನೆ ಇತ್ಯಾದಿಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.

ಕಲಾ ವಿದ್ಯಾರ್ಥಿನಿ ಶ್ರೀಪೂರ್ಣಾ ಅವರು ವಿದ್ಯಾರ್ಥಿಗಳ ಪರವಾಗಿ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿ ನಮನದ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು.

ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಪ್ರಾಸ್ತಾವಿಕ ನುಡಿಗಳನ್ನಾಡಿ ಪ್ರಾಚೀನ ಸಂಸ್ಕೃತಜ್ಞರ ಪರಿಸರ ಪ್ರೇಮ ಹಾಗೂ ಪ್ರಕೃತಿಪ್ರೀತಿ ವಿಚಾರಗಳ ಬಗ್ಗೆ ವಿವರಿಸಿದರು.

ಸೌಪರ್ಣಿಕಾ ರಾವ್ ಸ್ಮರಣಿಕೆ ನೀಡಿ ಗೌರವಿಸಿದರು. ಸಮೃದ್ಧಿ ಸ್ವಾಗತಿಸಿ ಪರಿಚಯಿಸಿದರು. ಪ್ರಸನ್ನಾ .ಪಿ. ನಿರೂಪಿಸಿ , ಧರೇಶ .ಹೆಚ್. ವಂದಿಸಿದರು.

Related posts

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ–ಮುಗೇರಡ್ಕ ಇದರ 25 ನೇ ವರ್ಷದ ರಜತ ಪಥ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ

Suddi Udaya

ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಆಳ್ವಾಸ್ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ ಆಯ್ಕೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಗೀತಾ ಜಯಂತಿ , ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ದಿ. ಕೋಟೇಶ್ವರ ಕೃಷ್ಣ ಐತಾಳ್ ಸ್ಮಾರಕ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬಿಜೆಪಿ ಕುಕ್ಕೇಡಿ ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya
error: Content is protected !!