37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

ಬೆಳ್ತಂಗಡಿ: ಶ್ರೀ ಕ್ಷೇತ್ರ ಸೌತಡ್ಕದ ದೇವಸ್ಥಾನದಲ್ಲಿ ದಿನಗೂಲಿ ನೌಕರರಾಗಿ ದುಡಿಯುತ್ತಿರುವ ಶ್ರೀಮತಿ ಸುಜಾತಾ ಇವರ ಪತಿ ಬಾಲಕೃಷ್ಣ ಶೆಟ್ಟಿ ಇವರು ಇತ್ತೀಚೆಗೆ ಆನೆ ದಾಳಿ ಸಂದರ್ಭ ಮೃತ ಪಟ್ಟಿದ್ದು ಆ ಸಮಯ ರಾಜ್ಯ ಕೆ.ಪಿ.ಸಿ.ಸಿ.ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾo ಇವರು ಮನೆ ಬೇಟಿ ನೀಡಿದ ಸಂದರ್ಭ, ಮನೆಯವರು ಮತ್ತು ಗ್ರಾಮಸ್ಥರು ಮೃತ ಬಾಲಕೃಷ್ಣ ಶೆಟ್ರ ಪುತ್ರಿ ಕುಮಾರಿ ವೇದಿತಳಿಗೆ , ಉದ್ಯೋಗ ಮತ್ತು ಆನೇ ದಾಳಿಯಿಂದ ಮೃತ ಪಟ್ಟ ಬಗ್ಗೆ ಅರಣ್ಯ ಇಲಾಖೆ ಯಿಂದ ಸೂಕ್ತ ಪರಿಹಾರ ದೊರಕಿಸಿಕೊಡುವಂತೆ ವಿನಂತಿಸಿದ್ದರು.

ಮನವಿಗೆ ಸ್ಪಂದಿಸಿದ ರಕ್ಷಿತ್ ಶಿವಾರಂ ರವರು ಬೆಂಗಳೂರಿನ ಪ್ರಸಿದ್ಧ ಐಟಿ ಕಂಪನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟಿದ್ದಾರೆ. ನ.17ರಂದು ಕುಮಾರಿ ವೇದಿತ ಅವರು ಐಟಿ ಉದ್ಯೋಗಿಯಾಗಿ ಕೆಲಸ ಸೇರುವಂತೆ ಸಂಸ್ಥೆಯು ಆದೇಶ ನೀಡಿರುತ್ತದೆ. ಅಲ್ಲದೆ ಅರಣ್ಯ ಇಲಾಖೆಯಿಂದ ಪರಿಹಾರವಾಗಿ ರೂ 20ಲಕ್ಷ ಮಂಜೂರಾತಿ ಗೊಳಿಸುವಲ್ಲಿಯೂ ಸಕ್ರಿಯ ಪಾತ್ರ ವಹಿಸಿ, ಪರಿಹಾರ ಒದಗಿಸಿದ ಮತ್ತು ಉದ್ಯೋಗವನ್ನು ದೊರಕಿಸಿಕೊಟ್ಟ ರಕ್ಷಿತ್ ಶಿವರಾಂ ಇವರಿಗೆ ಕ್ಷೇತ್ರದ ವ್ಯವಸ್ಥಾಪನ ಸಮಿತಿಯು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದೆ ಎಂದು ವ್ಯವಸ್ಥಾಪನ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಹತ್ಯಡ್ಕ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಅಳದಂಗಡಿ ಹಿಂದೂ ಯುವ ಶಕ್ತಿ ಆಲಡ್ಕ ಕ್ಷೇತ್ರ, ರಾಜಕೀಯ ರಹಿತ ಸಾಮಾಜಿಕ ಸೇವಾ ಸಂಘಟನೆಯ ನೂತನ ಪ್ರದಾನ ಕಚೇರಿ ಉದ್ಘಾಟನೆ

Suddi Udaya

ಸಿಎಸ್ಇಇಟಿ ಪರೀಕ್ಷೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಸಾಧನೆ

Suddi Udaya

ಪಿಲಿಗೂಡು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 5.92 ಲಕ್ಷ ನಿವ್ವಳ ಲಾಭ, ಶೇ. 25% ಡಿವಿಡೆಂಟ್ ಘೋಷಣೆ

Suddi Udaya

ನಾಲ್ಕೂರು: ಹೃದಯಾಘಾತದಿಂದ ಜಗದೀಶ್ ಪೂಜಾರಿ ಕುದ್ರೋಟ್ಟು ನಿಧನ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!