25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಜವಾಹರಲಾಲ್ ನೆಹರೂ ರವರ ಜನ್ಮ ದಿನದ ಅಂಗವಾಗಿ ಮಕ್ಕಳ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ವಿದ್ಯಾಸಂಸ್ಥೆಯ ಶಿಕ್ಷಕ ವೃಂದದವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ಮಕ್ಕಳೆಲ್ಲರಿಗೂ ಶುಭಾಶಯಗಳನ್ನು ಕೋರಿ,ವಿದ್ಯಾರ್ಥಿಗಳು ಪ್ರತಿನಿತ್ಯ ಕ್ರಿಯಾಶೀಲರಾಗಿದ್ದು ,ಸೃಜನಶೀಲತೆ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಮಹತ್ವವನ್ನು ತಿಳಿಸಿದರು.

ಸಂಸ್ಥೆಯ ಎಲ್ಲಾ ಶಿಕ್ಷಕ ಶಿಕ್ಷಕಿಯರು ಹಾಡಿನ ಮೂಲಕ ನೆರೆದಿದ್ದ ಎಲ್ಲಾ ಮಕ್ಕಳಿಗೆ ಪ್ರೀತಿಯ ಶುಭಾಶಯಗಳನ್ನು ತಿಳಿಸಿದರು.

ಸಂಸ್ಥೆಯ ಮುಖ್ಯಶಿಕ್ಷಕಿ ಶ್ರೀಮತಿ ವಿಜಯ ಮಕ್ಕಳನ್ನು ಉದ್ದೇಶಿಸಿ ಶಿಸ್ತು,ಪರಿಶ್ರಮ ಹಾಗೂ ಮಾನವೀಯ ಮೌಲ್ಯಗಳ ಮಹತ್ವವನ್ನು ವಿವರಿಸಿದರು.

ಶಾಲಾ ನಾಯಕಿ ದಿನಾಚರಣೆಯ ಕುರಿತಾಗಿ ಭಾಷಣದ ಮೂಲಕ ತನ್ನ ಅಭಿಪ್ರಾಯವನ್ನು ಹಂಚಿಕೊಂಡರು.

ಪ್ರಾಂಶುಪಾಲರು,ಸಂಯೋಜಕರಾದ ಯಶವಂತ್ ಜಿ ನಾಯಕ್ ಹಾಗೂ ಮುಖ್ಯಶಿಕ್ಷಕಿ ಯವರ ಜತೆಗೂಡಿ ಉಳಿದ ಎಲ್ಲ ಶಿಕ್ಷಕರು ನೆಹರೂರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ಸಲ್ಲಿಸಿದರು. ಮಕ್ಕಳೆಲ್ಲರೂ ತಮ್ಮ ಹರ್ಷವನ್ನು ವ್ಯಕ್ತಪಡಿಸಿದರು.ಎಲ್ಲರಿಗೂ ಸಿಹಿತಿಂಡಿ ವಿತರಿಸಲಾಯಿತು.
ಸಹಶಿಕ್ಷಕರಾದ ಪ್ರಶಾಂತ್ ಕೆ ಕಾರ್ಯಕ್ರಮ ನಿರೂಪಿಸಿ, ಸಹ ಶಿಕ್ಷಕಿ ಪ್ರಿಯತ ಸ್ವಾಗತಿಸಿ ,ದಿವ್ಯ ಕೆ ವಂದಿಸಿದರು.

ಮಕ್ಕಳ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ತರಗತಿವಾರು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಮಕ್ಕಳೆಲ್ಲರೂ ಉತ್ಸಾಹದಿಂದ ಪಾಲ್ಗೊಂಡರು.ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.ಅರ್ಥ ಪೂರ್ಣವಾಗಿ ಮಕ್ಕಳ ದಿನಾಚರಣೆ ಕಾರ್ಯಕ್ರಮವು ಸಂಪನ್ನಗೊಂಡಿತು.

Related posts

ವೇಣೂರು: ಕರಿಮಣೇಲು ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ ನಿಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಪ್ರಭಾರ ಪ್ರಾಂಶುಪಾಲರಾಗಿ ಸೂರಜ್ ಚಾರ್ಲ್ಸ್ ನ್ಯೂನೆಸ್ ನೇಮಕ

Suddi Udaya

ಪಟ್ಟೂರು ಕಾನೂನು ಬಾಹಿರ ಮನೆ ಜಪ್ತಿ : ತಪ್ಪಿತಸ್ತ ಅಧಿಕಾರಿ ಮೇಲೆ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಬೆಳ್ತಂಗಡಿ ಆಗ್ರಹ: ನೂತನ ಡಿವೈಎಸ್‌ಪಿ ಜೊತೆ ಮುಸ್ಲಿಂ ಮುಖಂಡರ ಮಾತುಕತೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಶಿಬಾಜೆ : ಭಂಡಿಹೊಳೆ ಶ್ರೀಹರಿ ದಾಮಲೆ ನಿಧನ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಪ್ರವರ್ತಿತಗೊಂಡು ಜೆಸಿಐ ಉಜಿರೆ ಸಿಟಿ ಘಟಕದ ಮರು ಸ್ಥಾಪನೆ: ಯುವ ಉದ್ಯಮಿ ಮಹಮ್ಮದ್ ಮಿರ್ಷಾದ್ ಅಧ್ಯಕ್ಷರಾಗಿ ಪದ ಸ್ವೀಕಾರ.

Suddi Udaya
error: Content is protected !!