26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾರಿಂಜ ಸ. ಕಿ. ಪ್ರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಸಭೆ

ಉರುವಾಲು: ಕಾರಿಂಜ ಸ. ಕಿ. ಪ್ರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಸಭೆಯನ್ನು ಶಾಲಾ ಅಧ್ಯಕ್ಷ ಜಗನ್ನಾಥ ರೈ ಇವರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಆಟೋಟ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮಾಡಲಾಯಿತು. ಶಾಲೆಯ ದಾನಿಯಾದ ವಿನಯಕುಮಾರ್ ಇವರನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು. ಮಕ್ಕಳ ಹಕ್ಕುಗಳು, ಅದರ ರಕ್ಷಣೆ ಬಗ್ಗೆ ಮಾಹಿತಿ ನೀಡಲಾಯಿತು.


ನಿವೃತ್ತ ಯೋಧರಾದ ಜೆ.ಕೆ ಪೂಜಾರಿ ಇಳಂತಿಲ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ‌ ಸಂದರ್ಭದಲ್ಲಿ ಶಾಲಾ ಉಪಾಧ್ಯಕ್ಷ ನುಸೈಬ, ಮಾಜಿ ಅಧ್ಯಕ್ಷ ಓಬಯ್ಯ ಪೂಜಾರಿ ಕಾರಿಂಜ , ಅಂಗನವಾಡಿ ಕಾರ್ಯಕರ್ತೆ ಶಶಿಪ್ರಭಾ, ಮಕ್ಕಳ ಪೋಷಕರು, ಶಾಲಾಭಿವೃದ್ಧಿ ಸಮಿತಿಯ‌ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ಮುಖ್ಯಗುರುಗಳಾದ ಗಿರಿಜಾ ಎನ್ ಸ್ವಾಗತಿಸಿ, ಸಹಶಿಕ್ಷಕರಾದ ಪರಮೇಶ್ವರ ಎಸ್ ನಿರೂಪಿಸಿದರು.

Related posts

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

Suddi Udaya

ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳನ್ನು ಸೃಜಿಸಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್

Suddi Udaya

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya
error: Content is protected !!