July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಹೆತ್ತವರ ಪೋಷಕರ/ಮಹಾಸಭೆ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಮತ್ತು ಹೆತ್ತವರ/ಪೋಷಕರ ಮಹಾಸಭೆ ನ 14 ರoದು ಜರುಗಿತು.

ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಅಮೀನಾ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ನೆಹರುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ನಾಯಕಿ ಕುಮಾರಿ ರಾಯಿಶ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಉಪಾಧ್ಯಕ್ಷೆ ಶ್ರೀಮತಿ ಲಾವಣ್ಯ ಎಸ್ ಶೆಟ್ಟಿ, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಉಮೇಶ್ ಕುಮಾರ್ ಮದ್ದಡ್ಕ, ದಾನಿಗಳಾದ ಸಾಜಿದ್ ಮದ್ದಡ್ಕ, ಆಶಾ ಕಾರ್ಯಕರ್ತೆ ಶ್ರೀಮತಿ ಜಯಂತಿ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಶಾಲಾ ಎಸ್‌ಡಿಎಂಸಿ ಸದಸ್ಯರು, ಅಧ್ಯಾಪಕ ವೃಂದ, ಅಡುಗೆ ಸಿಬ್ಬಂದಿಯವರು, ಹೆತ್ತವರು/ಪೋಷಕರು ಸಹಕರಿಸಿದರು. ಈ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ನೀಡಿ ಗೌರವಿಸಲಾಯಿತು, ಏಕ ಪೋಷಕ ಸದಸ್ಯರಿರುವ 12 ಮಂದಿ ವಿದ್ಯಾರ್ಥಿಗಳಿಗೆ ಕೊಡುಗೈದಾನಿ ಸಾಜಿದ್ ಮದ್ದಡ್ಕ ನಗದು ನೀಡಿ ಪ್ರೋತ್ಸಾಹಿಸಿದರು. ಹಾಗೂ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀನಾಥ್ ಬoಗೇರ ಇವರು ಬಹುಮಾನದ ಮೊತ್ತವನ್ನು ನೀಡಿ ಸಹಕರಿಸಿದರು.

ಕಾರ್ಯಕ್ರಮವು ಶಾಲಾ ವಿದ್ಯಾರ್ಥಿಗಳ ಮುoದಾಳತ್ವದಲ್ಲಿ ನಡೆಯಿತು. ತಂದೆ ನoತರ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಇವರ ಅಧ್ಯಕ್ಷತೆಯಲ್ಲಿ ಹೆತ್ತವರ/ಪೋಷಕರ, ಶಿಕ್ಷಕರ ಮಹಾಸಭೆ ಜರುಗಿತು, ಶಾಲಾ ಅಭಿವೃದ್ಧಿ ಮಕ್ಕಳ ರಕ್ಷಣೆ ನಮ್ಮ ಶಾಲೆ ನಮ್ಮ ಜವಾಬ್ದಾರಿ ಹಾಗೂ ಶಾಲಾ ವಾರ್ಷಿಕೋತ್ಸವದ ಬಗ್ಗೆ ವಿಚಾರ ವಿನಿಮಯ ನಡೆಯಿತು.ಶಾಲಾ ಮುಖ್ಯ ಶಿಕ್ಷಕ ಭಾಸ್ಕರ ಪ್ರಾಸ್ತಾವಿಕ ಮಾತನಾಡಿದರು.

(ವರದಿ ಮನು ಮದ್ದಡ್ಕ,)

Related posts

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಹಾವುಗಳ ಸಂರಕ್ಷಕರಾದ ಸ್ನೇಕ್ ಅಶೋಕ್ ನಾಗರ ಹಾವು ಹಿಡಿಯುವ ವೇಳೆ ಹಾವು ಕಚ್ಚಿ ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಧರ್ಮಸ್ಥಳದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

Suddi Udaya

ಗೇರುಕಟ್ಟೆ ಅರ್ಕುಳ ಸುಬ್ರಾಯ ಆಚಾರ್ಯ ಪ್ರತಿಷ್ಠಾನದಿಂದ ತೀರ್ಥಹಳ್ಳಿ ಗೋಪಾಲಾಚಾರ್ಯರಿಗೆ ಅರ್ಕುಳ ಪ್ರಶಸ್ತಿ ಪ್ರದಾನ

Suddi Udaya
error: Content is protected !!